ಬೆಂಗಳೂರು: ಕರ್ನಾಟಕದ ಅನರ್ಹ ಶಾಸಕರ 15 ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಜಾರಿ ಮುಂದೂಡಿಕೆಯನ್ನು ವಿಚಾರದಲ್ಲಿ ಸ್ಪಷ್ಟನೆ ನೀಡುವಂತೆ ಕರ್ನಾಟಕ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
15 ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಜಾರಿಯನ್ನು ಮುಂದೂಡಿದ ಆಯೋಗದ ಕ್ರಮ ಪ್ರಶ್ನಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಮೊರೆ ಹೋಗಿದ್ದರು. ಇದಲ್ಲದೆ ಚುನಾವಣೆ ಘೋಷಣೆಯಾದ ನಂತರ ನಿಗಮ ಮಂಡಳಿಗಳಿಗೆ ಸದಸ್ಯರನ್ನು ನೇಮಕ ಮಾಡಿದ್ದನ್ನೂ ಅವರು ಪ್ರಶ್ನಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರಕಾರಕ್ಕೆ ತನ್ನ ನಿಲುವು ತಿಳಿಸುವಂತೆ ಸೂಚನೆ ನೀಡಿದೆ. ನೀತಿ ಸಂಹಿತೆ ಮುಂದೂಡಿಕೆ ಬಗ್ಗೆಯೂ ಹೈಕೋರ್ಟ್ ಸ್ಪಷ್ಟನೆ ಕೇಳಿದ್ದು, ಚುನಾವಣಾ ಆಯೋಗ ಉತ್ತರಿಸಲು ಕಾಲಾವಕಾಶ ಕೋರಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.
15 ಕ್ಷೇತ್ರಗಳಿಗೆ ಇದೇ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ.
15 ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಜಾರಿಯನ್ನು ಮುಂದೂಡಿದ ಆಯೋಗದ ಕ್ರಮ ಪ್ರಶ್ನಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಮೊರೆ ಹೋಗಿದ್ದರು. ಇದಲ್ಲದೆ ಚುನಾವಣೆ ಘೋಷಣೆಯಾದ ನಂತರ ನಿಗಮ ಮಂಡಳಿಗಳಿಗೆ ಸದಸ್ಯರನ್ನು ನೇಮಕ ಮಾಡಿದ್ದನ್ನೂ ಅವರು ಪ್ರಶ್ನಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರಕಾರಕ್ಕೆ ತನ್ನ ನಿಲುವು ತಿಳಿಸುವಂತೆ ಸೂಚನೆ ನೀಡಿದೆ. ನೀತಿ ಸಂಹಿತೆ ಮುಂದೂಡಿಕೆ ಬಗ್ಗೆಯೂ ಹೈಕೋರ್ಟ್ ಸ್ಪಷ್ಟನೆ ಕೇಳಿದ್ದು, ಚುನಾವಣಾ ಆಯೋಗ ಉತ್ತರಿಸಲು ಕಾಲಾವಕಾಶ ಕೋರಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.
15 ಕ್ಷೇತ್ರಗಳಿಗೆ ಇದೇ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ.