ಆ್ಯಪ್ನಗರ

ಎ.ಕೆ.ಸುಬ್ಬಯ್ಯ ಇನ್ನಿಲ್ಲ

ಹಿರಿಯ ರಾಜಕಾರಣಿ, ಮಾಜಿ ಸಚಿವ, ವಕೀಲ ಎಕೆಸುಬ್ಬಯ್ಯ (85) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು...

Vijaya Karnataka 28 Aug 2019, 5:00 am
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ, ವಕೀಲ ಎ.ಕೆ.ಸುಬ್ಬಯ್ಯ (85) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು.
Vijaya Karnataka Web BNG-MDK-MDK27JAY13


ಒಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ಮಧ್ಯಾಹ್ನ ಕೊನೆಯುಸಿರೆಳೆದರು. ಅವರಿಗೆ ಪುತ್ರ, ಸಹಾಯಕ ಅಡ್ವೊಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ ಸೇರಿ ಐವರು ಪುತ್ರರಿದ್ದಾರೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹುದಿಕೇರಿ ಗ್ರಾಮದವರಾದ ಸುಬ್ಬಯ್ಯ ಚಿಕ್ಕಂದಿನಿಂದಲೇ ಹೋರಾಟ ಮನೋಭಾವ ಹೊಂದಿದ್ದರು. ಇವರನ್ನು ಪ್ರಖರ ವಿಚಾರವಾದಿ ಎಂದೇ ಕರೆಯಲಾಗುತ್ತಿತ್ತು. ಪಾರ್ಥಿವ ಶರೀರವನ್ನು ಮಂಗಳವಾರ ಸಂಜೆ ಆರ್‌.ಟಿ.ನಗರದಲ್ಲಿರುವ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಬುಧವಾರ ಬೆಳಗ್ಗೆ ಕೊಡಗಿನಲ್ಲಿರುವ ಕಾಫಿ ಎಸ್ಟೇಟ್‌ಗೆ ಕೊಂಡೊಯ್ಡು ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ