ಆ್ಯಪ್ನಗರ

ಚುನಾವಣೆ ಸೋಲಿನ ಹಿನ್ನೆಲೆ: ರಾಜ್ಯ ಕಾಂಗ್ರೆಸ್ ಘಟಕ ವಿಸರ್ಜನೆ, ಆದರೂ ಗುಂಡೂರಾವ್, ಖಂಡ್ರೆ ಸ್ಥಾನ ಭದ್ರ

ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಘಟಕದ ವಿಸರ್ಜನೆಯನ್ನು ಘೋಷಿಸಿದರು. ಕೆಪಿಸಿಸ 170ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಹೊಂದಿತ್ತು. ರಾಜ್ಯದಲ್ಲಿ ಪಕ್ಷದ ಪುನಾರಚನೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲ್ಲಿಸಿದ ಅಧಿಕೃತ ಕೋರಿಕೆ ಮೇರೆಗೆ ಹೈಕಮಾಂಡ್‌ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

Vijaya Karnataka Web 19 Jun 2019, 4:02 pm
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಕರ್ನಾಟಕ ಘಟಕವನ್ನು ಬುಧವಾರ ವಿಸರ್ಜಿಸಿದ್ದಾರೆ. ಆದರೆ ಕೆಪಿಸಿಸಿಯ ಹಾಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
Vijaya Karnataka Web Dinesh Gundurao- Eshwar Khandre


ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಘಟಕದ ವಿಸರ್ಜನೆಯನ್ನು ಘೋಷಿಸಿದರು. ಕೆಪಿಸಿಸ 170ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಹೊಂದಿತ್ತು.

ರಾಜ್ಯದಲ್ಲಿ ಪಕ್ಷದ ಪುನಾರಚನೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲ್ಲಿಸಿದ ಅಧಿಕೃತ ಕೋರಿಕೆ ಮೇರೆಗೆ ಹೈಕಮಾಂಡ್‌ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಈ ದಿಢೀರ್‌ ನಿರ್ಧಾರವು ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಅಚ್ಚರಿಯಲ್ಲಿ ಕೆಡವಿದೆ. ಚುನಾವಣೆ ಸೋಲಿಗೆ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಮತ್ತು ಈಶ್ವರ್ ಖಂಡ್ರೆ ರಾಜೀನಾಮೆ ನೀಡಬೇಕು ಎಂದು ಬಯಸಿದ್ದ ನಾಯಕರು ಈ ಬೆಳವಣಿಗೆಯಿಂದ ತೀವ್ರ ಅಚ್ಚರಿಗೆ ಒಳಗಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ಅಥವಾ ಒಕ್ಕಲಿಗ ಮುಖಂಡರನ್ನು ನೇಮಿಸಬೇಕು ಎಂಬ ಕೂಗು ಬಲವಾಗಿತ್ತು. ಹೀಗಾಗಿ ಎಂ.ಬಿ ಪಾಟೀಲ್‌ ಮತ್ತು ಡಿ.ಕೆ ಶಿವಕುಮಾರ್ ಪರವಾಗಿ ಸಾಕಷ್ಟು ಲಾಬಿಗಳೂ ಆರಂಭವಾಗಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ