ಆ್ಯಪ್ನಗರ

ರಾಜ್ಯ ಉಸ್ತುವಾರಿ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ಗುಡ್ ಬೈ?

ರಾಜ್ಯದ ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದ ನಾಯಕರ ರಾಜೀನಾಮೆ ಪರ್ವ ಮುಂದುವರೆದಿದೆ. ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್ ಬಳಿಕ ಈಗ ಮತ್ತೊಬ್ಬ ನಾಯಕ ತಮ್ಮ "ಉಸ್ತುವಾರಿ"ಯಿಂದ ಹಿಂದೆ ಸರಿದಿದ್ದಾರೆ.

Vijaya Karnataka Web 10 Dec 2019, 3:00 pm
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿಗೆ ಕೆ.ಸಿ.ವೇಣುಗೋಪಾಲ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Vijaya Karnataka Web KC Venugopal


ಕೆ.ಸಿ.ವೇಣುಗೋಪಾಲ್ ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರಿಗೆ ರವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮಾತ್ರವಲ್ಲ ಮುಂದಿನ ವಾರದೊಳಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ನೂತನ ಉಸ್ತುವಾರಿಯನ್ನು ನೇಮಿಸಲು ತೀರ್ಮಾನಿಸಲಾಗಿದೆಯಂತೆ.

ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ನಿರೀಕ್ಷಿತ ಫಲಿತಾಂಶವನ್ನು ಪಡೆದುಕೊಳ್ಳದ ಕಾರಣಕ್ಕೆ ವೆಣುಗೋಪಾಲ್ ಉಸ್ತುವಾರಿ ಸ್ಥಾನ ತೊರೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ನಿನ್ನೆ ಫಲಿತಾಂಶದ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಅವರು ರಾಜೀನಾಮೆ ನೀಡಿದ್ದರು. ಈಗ ಈ ಸಾಲಿಗೆ ಕೆ.ಸಿ.ವೇಣುಗೋಪಾಲ್ ಸೇರಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ