ಆ್ಯಪ್ನಗರ

ಜಾರಕಿಹೊಳಿ ವಿಡಿಯೋ ಬಹಿರಂಗ ಬೆನ್ನಲ್ಲೇ, ಮಾನಹಾನಿ ಮಾಡದಂತೆ 6 ಸಚಿವರು ಕೋರ್ಟ್‌ಗೆ ಮೊರೆ

ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಅಶ್ಲೀಲ ವಿಡಿಯೊ ಬಹಿರಂಗಗೊಂಡ ಬೆನ್ನಲ್ಲೇ ರಾಜ್ಯದ ಆರು ಸಚಿವರು ಮಾನಹಾನಿಕಾರಕ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

Vijaya Karnataka Web 6 Mar 2021, 7:22 am
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಅಶ್ಲೀಲ ವಿಡಿಯೊ ಬಹಿರಂಗಗೊಂಡ ಬೆನ್ನಲ್ಲೇ ನ್ಯಾಯಾಲಯದ ಮೊರೆ ಹೋಗಿರುವ ರಾಜ್ಯದ ಆರು ಸಚಿವರು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಮಾನಹಾನಿಕಾರಕ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧ ಕೋರಿ ಅರ್ಜಿ ಸಲ್ಲಿಸಿದ್ದಾರೆ.
Vijaya Karnataka Web k-sudhakar


ಸಚಿವರಾದ ಶಿವರಾಮ ಹೆಬ್ಬಾರ್‌, ಬಿ.ಸಿ ಪಾಟೀಲ್‌, ಎಸ್‌.ಟಿ ಸೋಮಶೇಖರ್‌, ಡಾ. ಕೆ. ಸುಧಾಕರ್‌, ಕೆ. ಸಿ. ನಾರಾಯಣ ಗೌಡ ಮತ್ತು ಭೈರತಿ ಬಸವರಾಜು ಅವರು ತಮ್ಮ ಮಾನಹಾನಿಯಾಗುವ ಸುದ್ದಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರ್ಟ್‌ ಮೊರೆ ಹೋಗಿದ್ದಾರೆ. ಯಾವ ರೀತಿಯ ಮಾನಹಾನಿಕಾರಕ ಎನ್ನುವುದನ್ನು ಅರ್ಜಿಯಲ್ಲಿ ಹೇಳಿಕೊಂಡಿಲ್ಲ.

ಉತ್ತರ ಕರ್ನಾಟಕ ಮೂಲದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್‌ ಮುಲಾಲಿ ಕೂಡ ಸುಮಾರು 16 ಪ್ರಭಾವಿಗಳ ವಿವಾದಾತ್ಮಕ ವಿಡಿಯೋಗಳಿವೆ ಎಂದು ಹೇಳಿದ್ದರು. ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಇವರನ್ನು 68ನೇ ಪ್ರತಿವಾದಿ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ