ಆ್ಯಪ್ನಗರ

ಸುಪ್ರೀಂ ತೀರ್ಪು ಬೆನ್ನಲ್ಲೇ ಬಿಜೆಪಿ ಕೋರ್ ಕಮಿಟಿ ಸಭೆ, ಅನರ್ಹರಿಗೆ ಸಿಗುತ್ತಾ ಟಿಕೆಟ್...?

ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ. ಸ್ವೀಪರ್ ನಿರ್ಧಾರವನ್ನು ಎತ್ತಿ ಹಿಡಿದ ಬೆನ್ನಲ್ಲೇ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದೆ. ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಬಗ್ಗೆ ಮಾತುಕತೆ ನಡೆಸಲಿದೆ.

Vijaya Karnataka Web 13 Nov 2019, 12:57 pm
ಬೆಂಗಳೂರು: ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಬಿಜೆಪಿ ಪಕ್ಷ ಕೋರ್ ಕಮಿಟಿ ಸಭೆ ಕರೆದಿದೆ. ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಬಗ್ಗೆ ಮಾತುಕತೆ ನಡೆಯಲಿದೆ.
Vijaya Karnataka Web yedurappa kateelu


ಬಿಜೆಪಿಗೆ ನೈತಿಕತೆಯಿದ್ದರೆ ಅನರ್ಹರಿಗೆ ಟಿಕೆಟ್‌ ನೀಡಬಾರದು: ಕಾಂಗ್ರೆಸ್‌

ಸುಪ್ರೀಂ ಕೋರ್ಟ್ ತೀರ್ಪು ಹೊರ ಬಂದ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ರಾಜ್ಯದ 17 ಜನ ಶಾಸಕರ ಅನರ್ಹತೆ ವಿವಾದದ ಬಗ್ಗೆ ಸಭಾಪತಿಗಳ ತೀರ್ಮಾನ ಎತ್ತಿಹಿಡಿದು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವ ನ್ಯಾಯಾಯದ ತೀರ್ಪು ಸ್ವಾಗತಾರ್ಹ ಎಂದಿದ್ದಾರೆ. ಜೊತೆಗೆ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸ್ಪೀಕರ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌; ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿ , ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹ. ಹಿಂದಿನ ಸ್ಪೀಕರ್ ರಮೇಶ್‌ಕುಮಾರ್ ಅವರು ಸಿದ್ದರಾಮಯ್ಯ ಜತೆ ಸೇರಿ ಷಡ್ಯಂತ್ರ ಮಾಡಿದ್ದರು. ಕೋರ್ಟ್ ಈಗ ತೀರ್ಪು ನೀಡಿದೆ. ನಮಗೆ ಎಲ್ಲ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ. ಟಿಕೆಟ್ ಹಂಚಿಕೆ ಬಗ್ಗೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ