ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಇಂದು ಸ್ಯಾಂಡಲ್ವುಡ್ ಬಂದ್
ಕಲಿಯುಗ ಕರ್ಣ, ರೆಬೆಲ್ ಸ್ಟಾರ್ ಅವರಿಗೆ ಭಾನುವಾರ ಮತ್ತು ಸೋಮವಾರ ಅಂತಿಮ ನಮನ ಸಲ್ಲಿಸಲಾಗುತ್ತಿದ್ದು, ಅವರ ಗೌರವಾರ್ಥವಾಗಿ ಇಂದು ಯಾವುದೇ ಚಲನ ಚಿತ್ರೀಕರಣವನ್ನು ನಡೆಸಲಾಗುವುದಿಲ್ಲ.
Vijaya Karnataka Web 25 Nov 2018, 2:47 pm
ಬೆಂಗಳೂರು: ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರ ಹಠಾತ್ ನಿಧನದ ಹಿನ್ನೆಲೆಯಲ್ಲಿ ಭಾನುವಾರ ಕನ್ನಡ ಚಲನಚಿತ್ರೋದ್ಯಮ ಸಂಪೂರ್ಣವಾಗಿ ಬಂದ್ ಇರಲಿದೆ.
ಕಲಿಯುಗ ಕರ್ಣ, ರೆಬೆಲ್ ಸ್ಟಾರ್ ಅವರಿಗೆ ಭಾನುವಾರ ಮತ್ತು ಸೋಮವಾರ ಅಂತಿಮ ನಮನ ಸಲ್ಲಿಸಲಾಗುತ್ತಿದ್ದು, ಅವರ ಗೌರವಾರ್ಥವಾಗಿ ಇಂದು ಯಾವುದೇ ಚಲನ ಚಿತ್ರೀಕರಣವನ್ನು ನಡೆಸಲಾಗುವುದಿಲ್ಲ.
ಸಂಜೆ 3.30 ಗಂಟೆಯವರೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. 4 ಗಂಟೆ ಬಳಿಕ ಗಂಟೆಯಿಂದ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡುವ ಸಾಧ್ಯತೆ ಇದ್ದು, ಸೋಮವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿಗೆ ಕರೆತಂದು ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೊಂದೆಡೆ, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಸಹ ನಡೆಯುತ್ತಿದೆ.
ಕಲಿಯುಗ ಕರ್ಣ, ರೆಬೆಲ್ ಸ್ಟಾರ್ ಅವರಿಗೆ ಭಾನುವಾರ ಮತ್ತು ಸೋಮವಾರ ಅಂತಿಮ ನಮನ ಸಲ್ಲಿಸಲಾಗುತ್ತಿದ್ದು, ಅವರ ಗೌರವಾರ್ಥವಾಗಿ ಇಂದು ಯಾವುದೇ ಚಲನ ಚಿತ್ರೀಕರಣವನ್ನು ನಡೆಸಲಾಗುವುದಿಲ್ಲ.
ಸಂಜೆ 3.30 ಗಂಟೆಯವರೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. 4 ಗಂಟೆ ಬಳಿಕ ಗಂಟೆಯಿಂದ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡುವ ಸಾಧ್ಯತೆ ಇದ್ದು, ಸೋಮವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿಗೆ ಕರೆತಂದು ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೊಂದೆಡೆ, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಸಹ ನಡೆಯುತ್ತಿದೆ.