ಆ್ಯಪ್ನಗರ

ಇಂದೂ ಚಿತ್ರೀಕರಣ-ಚಿತ್ರ ಪ್ರದರ್ಶನ ಬಂದ್‌

ನಟ ಅಂಬರೀಶ್‌ ಗೌರವಾರ್ಥ ಭಾನುವಾರ ಬೆಂಗಳೂರಿನ ಎಲ್ಲಾ ಚಿತ್ರಮಂದಿರಗಳೂ ಚಿತ್ರ ಪ್ರದರ್ಶನ ನಿಲ್ಲಿಸಿದ್ದವು ಜತೆಗೆ ಇಡೀ ಚಿತ್ರರಂಗ ಚಿತ್ರೀಕರಣವನ್ನು ಸ್ಥಗಿತಗೊಳಿಸಿತ್ತು.

Vijaya Karnataka 26 Nov 2018, 5:00 am
ಬೆಂಗಳೂರು: ನಟ ಅಂಬರೀಶ್‌ ಗೌರವಾರ್ಥ ಭಾನುವಾರ ಬೆಂಗಳೂರಿನ ಎಲ್ಲಾ ಚಿತ್ರಮಂದಿರಗಳೂ ಚಿತ್ರ ಪ್ರದರ್ಶನ ನಿಲ್ಲಿಸಿದ್ದವು. ಜತೆಗೆ ಇಡೀ ಚಿತ್ರರಂಗ ಚಿತ್ರೀಕರಣವನ್ನು ಸ್ಥಗಿತಗೊಳಿಸಿತ್ತು. ಸೋಮವಾರ ಅಂಬಿಯ ಅಂತ್ಯ ಸಂಸ್ಕಾರ ನಡೆಯುವುದರಿಂದ ಈ ಸಂದರ್ಭದಲ್ಲಿ ಯಾವುದೇ ಚಿತ್ರ ಪ್ರದರ್ಶನ ಮಾಡದಿರಲು ಚಿತ್ರಮಂದಿರ ಮಾಲೀಕರು ನಿರ್ಧರಿಸಿದ್ದಾರೆ. ಇದೇ ರೀತಿ ಸೋಮವಾರವೂ ಯಾವುದೇ ಸಿನಿಮಾಗಳ ಚಿತ್ರೀಕರಣ ನಡೆಯುವುದಿಲ್ಲ. ಎಲ್ಲರೂ ಅಂತ್ಯಸಂಸ್ಕಾರದಲ್ಲಿ ಭಾಗಿ ಆಗಿ ಅಂತಿಮ ಗೌರವ ಸಲ್ಲಿಸಲಿದ್ದಾರೆ ಎಂದು ಚಿತ್ರರಂಗದ ಮುಖಂಡರು ತಿಳಿಸಿದ್ದಾರೆ.
Vijaya Karnataka Web ambi

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ