ಆ್ಯಪ್ನಗರ

ಆ್ಯಂಬಿಡೆಂಟ್‌ ಕೇಸ್‌ನಲ್ಲಿ ಜನಾರ್ದನ ರೆಡ್ಡಿ ವಿಚಾರಣೆ

ಬಹುಕೋಟಿ ಆ್ಯಂಬಿಡೆಂಟ್‌ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಸುಮಾರು 3 ತಾಸುಗಳ ಕಾಲ ವಿಚಾರಣೆ ನಡೆಸಿದರು.

Vijaya Karnataka 4 Jul 2019, 5:00 am
ಬೆಂಗಳೂರು : ಬಹುಕೋಟಿ ಆ್ಯಂಬಿಡೆಂಟ್‌ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಸುಮಾರು 3 ತಾಸುಗಳ ಕಾಲ ವಿಚಾರಣೆ ನಡೆಸಿದರು.
Vijaya Karnataka Web ambident issue janardan reddi enquired
ಆ್ಯಂಬಿಡೆಂಟ್‌ ಕೇಸ್‌ನಲ್ಲಿ ಜನಾರ್ದನ ರೆಡ್ಡಿ ವಿಚಾರಣೆ


ಶಾಂತಿ ನಗರದಲ್ಲಿರುವ ಇ.ಡಿ ಕಚೇರಿಗೆ ಮಧ್ಯಾಹ್ನ ಆಗಮಿಸಿದ್ದ ಜನಾರ್ದನ ರೆಡ್ಡಿ ಅವರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆ್ಯಂಬಿಡೆಂಟ್‌ ಕಂಪನಿ ಮಾಲೀಕ ಸೈಯ್ಯದ ಅಹ್ಮದ್‌ ಫರೀದ್‌ ವಿಚಾರಣೆ ವೇಳೆ, ತನ್ನ ವಿರುದ್ಧದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ನೆರವಾಗಲು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣವನ್ನು ರೆಡ್ಡಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದ. ಈ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಣಕಾಸು ಲೇವಾದೇವಿ ನಿಯಂತ್ರಣ ಕಾಯಿದೆ ಅಡಿ ಕೇಸ್‌ ದಾಖಲಿಸಿಕೊಂಡಿದ್ದು, ಈ ಬಗ್ಗೆ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆಂದು ತಿಳಿದು ಬಂದಿದೆ.

ವಿಚಾರಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ''ಇ.ಡಿ ವಿಚಾರಣೆ ನನಗೆ ಹೊಸದಲ್ಲ. ಆಗಾಗ ಬರುತ್ತಿರುತ್ತೇನೆ. ಆದರೆ, ಇವತ್ತು ನಿಮ್ಮ ಕಣ್ಣಿಗೆ ಬಿದ್ದಿದ್ದೇನೆ. ಆ್ಯಂಬಿಡೆಂಟ್‌ ಪ್ರಕರಣದಲ್ಲಿ ಅಧಿಕಾರಿಗಳು ಈ ಹಿಂದೆಯೇ ನನ್ನನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ