ಆ್ಯಪ್ನಗರ

ಈಶ್ವರಪ್ಪಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶತಾಯುಗತಾಯ ಗೆಲ್ಲಲೇಬೇಕು. ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲೇಬೇಕು. ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜತೆಗಿದ್ದು ಕೆಲಸ ಮಾಡಬೇಕು. ಅನಗತ್ಯ ಗೊಂದಲ ಸೃಷ್ಠಿಸಿದರೇ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೇರವಾಗಿ ಕೆ.ಎಸ್.ಈಶ್ವರಪ್ಪ ಅವರ ಮುಖ ನೋಡುತ್ತಾ ಎಚ್ಚರಿಕೆ ನೀಡಿದರು.

ವಿಕ ಸುದ್ದಿಲೋಕ 13 Aug 2017, 1:04 pm
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶತಾಯುಗತಾಯ ಗೆಲ್ಲಲೇಬೇಕು. ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲೇಬೇಕು. ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜತೆಗಿದ್ದು ಕೆಲಸ ಮಾಡಬೇಕು. ಅನಗತ್ಯ ಗೊಂದಲ ಸೃಷ್ಠಿಸಿದರೇ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೇರವಾಗಿ ಕೆ.ಎಸ್.ಈಶ್ವರಪ್ಪ ಅವರ ಮುಖ ನೋಡುತ್ತಾ ಎಚ್ಚರಿಕೆ ನೀಡಿದರು.
Vijaya Karnataka Web amit shah warns eashwarappa
ಈಶ್ವರಪ್ಪಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ


ಪಕ್ಷದೊಳಗಿನ ಆಂತರಿಕ ಸಮಸ್ಯೆಗಳಿಂದಲೇ ಬಿಜೆಪಿ ನಿಷ್ಕ್ರಿಯವಾಗಿದೆ ಎಂದು ವಿನಯ್ ಅಪಹರಣ ಪ್ರಕರಣ ಪ್ರಸ್ತಾಪಿಸಿದ ಶಾ, ನಿಮ್ಮಿಂದ ಪಕ್ಷದಲ್ಲಿ ಒಂದಿಲ್ಲೊಂದು ಗೊಂದಲ ಸೃಷ್ಟಿಯಾಗುತ್ತಿದ್ದು, ಪಕ್ಷಕ್ಕೆ ಹಿನ್ನೆಡೆಯಾಗುತ್ತಿದೆ. ಇನ್ನು ಮುಂದೆ ಇಂಥದಕ್ಕೆ ಅವಕಾಶ ನೀಡಬಾರದು. ಈ ಪ್ರಕರಣವನ್ನು ಕಾಂಗ್ರೆಸ್ ಸದ್ದಿಲ್ಲದೆ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಈಶ್ವರಪ್ಪನವರಿಗೆ ಕ್ಲಾಸ್ ತೆಗೆದುಕೊಂಡರು.

ಅಮಿತ್ ಶಾ ಅವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದರೆ, ಯಡಿಯೂರಪ್ಪ ಹಾಗೂ ಈಶ್ವರಪ್ಪ ತುಟಿ ಬಿಡದೆ ನಿಂತಿದ್ದರು. ಟಿಕೆಟ್ ಬಗ್ಗೆ ಯಾರು ಚಿಂತಿಸಬೇಕಿಲ್ಲ. ಪಕ್ಷದ ಕೆಳಮಟ್ಟದಲ್ಲಿ ಕೆಲಸ ಮಾಡುವ ನಾಯಕರಿಗೂ ಟಿಕೆಟ್ ನೀಡಲಾಗುತ್ತದೆ. ಟಿಕೆಟ್ ಹಂಚಿಕೆಯನ್ನು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ