ಆ್ಯಪ್ನಗರ

ಕೇಂದ್ರದ ಸೂಚನೆಯಂತೆ ರಾಜ್ಯಪಾಲರಿಂದ ಸರ್ವಪಕ್ಷ ಸಭೆ, ವಿಶೇಷ ಅರ್ಥ ಕಲ್ಪಿಸಬೇಡಿ ಎಂದ ಆರ್‌. ಅಶೋಕ್

ಕೇವಲ ಕರ್ನಾಟಕ ಮಾತ್ರವಲ್ಲ. ಎಲ್ಲಾ ರಾಜ್ಯಗಳಲ್ಲೂ ಈ ರೀತಿಯ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲ ರಾಜ್ಯದ ರಾಜ್ಯಪಾಲರು ಸರ್ವ ಪಕ್ಷ ಸಭೆಯನ್ನು ನಡೆಸುತ್ತಿದ್ದಾರೆ. ಇದರಲ್ಲೇನು ವಿಶೇಷವಿಲ್ಲ ಎಂದು ಆರ್‌ ಅಶೋಕ್‌ ಸ್ಪಷ್ಟಪಡಿಸಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka 20 Apr 2021, 2:49 pm

ಹೈಲೈಟ್ಸ್‌:

  • ಕೇವಲ ಕರ್ನಾಟಕ ಮಾತ್ರವಲ್ಲ. ಎಲ್ಲಾ ರಾಜ್ಯಗಳಲ್ಲೂ ಈ ರೀತಿಯ ಪ್ರಕ್ರಿಯೆ ನಡೆಯುತ್ತಿದೆ ಎಂದ ಆರ್‌ ಅಶೋಕ್‌
  • ಎಲ್ಲ ರಾಜ್ಯದ ರಾಜ್ಯಪಾಲರು ಸರ್ವ ಪಕ್ಷ ಸಭೆಯನ್ನು ನಡೆಸುತ್ತಿದ್ದಾರೆ. ಇದರಲ್ಲೇನು ವಿಶೇಷವಿಲ್ಲ ಎಂದ ಸಚಿವರು
  • ಕೇಂದ್ರ ಸರಕಾರ ನೀಡಿರುವ ಸೂಚನೆಯಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ ಎಂದ ಅಶೋಕ್‌
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web R Ashok
ಬೆಂಗಳೂರು: ಕೇಂದ್ರ ಸರಕಾರ ನೀಡಿರುವ ಸೂಚನೆಯಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಇದರಲ್ಲಿ ವಿಶೇಷ ಅರ್ಥ ಕಲ್ಪಿಸಬೇಕಾದ ಅಗತ್ಯ ಇಲ್ಲ ಎಂದು ಕಂದಾಯ ಸಚಿವ ಸಚಿವ ಆರ್‌ ಅಶೋಕ್ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಕೇವಲ ಕರ್ನಾಟಕ ಮಾತ್ರ ಅಲ್ಲ, ಎಲ್ಲಾ ರಾಜ್ಯಗಳಲ್ಲೂ ಈ ರೀತಿಯ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲ ರಾಜ್ಯದ ರಾಜ್ಯಪಾಲರು ಸಭೆಯನ್ನು ನಡೆಸುತ್ತಿದ್ದಾರೆ. ಇದರಲ್ಲೇನು ವಿಶೇಷವಿಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಸರಕಾರ ಕೋವಿಡ್‌ ನಿಯಂತ್ರಣಕ್ಕೆ ಏನೆಲ್ಲಾ ಕ್ರಮ ಕೈಗೊಂಡಿದೆ ಎಂಬ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಸರಕಾರ ಹಾಗೂ ವಿರೋಧ ಪಕ್ಷಗಳು ಒಟ್ಟಾಗಿ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು.
ಕೋವಿಡ್‌ ಸಂಕಷ್ಟ: ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ಕಾಂಗ್ರೆಸ್ ಪ್ರಶ್ನೆ
ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರದ ಸಚಿವರ ಜೊತೆ ಈ ವಿಚಾರವಾಗಿ ಮಾತನಾಡಿದ್ದಾರೆ. ಆಮ್ಲಜನಕ ಸಂಗ್ರಹಕ್ಕೆ ದೊಡ್ಡ ಆಸ್ಪತ್ರೆಗಳಲ್ಲಿ ಅವಕಾಶ ಇದ್ದರೆ, ಅವರಿಗೆ ಎಷ್ಟು ಬೇಕಾದರೂ ಆಕ್ಸಿಜನ್ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಈ ವ್ಯವಸ್ಥೆ ಮಾಡಲು ಅವಕಾಶ ಇದ್ದರೂ ಅವರು ಮಾಡಿಲ್ಲ. ಅವರೆಲ್ಲಾ ಇದೀಗ ಸಿಲಿಂಡರ್ ಆಕ್ಸಿಜನ್ ಅವಲಂಬಿಸಿದ್ದಾರೆ. ಆದರೆ ಸಿಲಿಂಡರ್ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಸಿಲಿಂಡರ್‌ ವ್ಯವಸ್ಥೆ ಮಾಡಲಾಗುವುದು. ಸರಕಾರದ ವತಿಯಿಂದ ಖಾಸಗಿಯವರಿಗೆ ಸಿಲಿಂಡರ್‌ ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ