ಆ್ಯಪ್ನಗರ

ಖಾತೆ ಬದಲಾವಣೆಯಿಂದ ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿರೋದು ಸಾಬೀತು; ಡಿಕೆಶಿ

ಆರೋಗ್ಯ ಸಚಿವರ ಖಾತೆಯನ್ನು ಬದಲಾಯಿಸಿದ್ದರಿಂದ ನಮ್ಮ ಆರೋಪ ನಿಜವಾಗಿದೆ. ಕೊರೊನಾ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ ಎಂಬ ವಾದಕ್ಕೆ ನಾವಿನ್ನೂ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

Vijaya Karnataka 13 Oct 2020, 7:38 am
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಸಂಪುಟ ಪುನರ್‌ರಚನೆಗೆ ನಿರ್ಧಾರ ತೆಗೆದುಕೊಂಡಿರುವುದರಿಂದ ಈ ಸರಕಾರ ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂಬುದು ಸಾಬೀತಾದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಟೀಕಿಸಿದ್ದಾರೆ.
Vijaya Karnataka Web DKS1
KPCC chief DK Shivakumar


ಶೋಭಾ ಕರಂದ್ಲಾಜೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ನಾಯಕಿಯರು; ಕುಸುಮಾ ವಿರುದ್ಧದ ಹೇಳಿಕೆಗೆ ಆಕ್ರೋಶ

ಕೊರೊನಾ ನಿರ್ವಹಣೆಯಲ್ಲಿ ಭ್ರಷ್ಟಾಚಾರವಾಗಿದೆ, ಸರಕಾರ ವಿಫಲವಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು. ಆರೋಗ್ಯ ಸಚಿವರ ಖಾತೆಯನ್ನು ಬದಲಾಯಿಸಿದ್ದರಿಂದ ನಮ್ಮ ಆರೋಪ ನಿಜವಾಗಿದೆ. ಕೊರೊನಾ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ ಎಂಬ ವಾದಕ್ಕೆ ನಾವಿನ್ನೂ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ರಾಮುಲು ಜೊತೆಯಿದ್ದ ಆರೋಗ್ಯ ಖಾತೆಯೂ ಸುಧಾಕರ್ ಹೆಗಲಿಗೆ..! ಏಕೆ ಈ ದಿಢೀರ್‌ ಬದಲಾವಣೆ?

ಪೀಟರ್‌ ಪರ ಪ್ರಚಾರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸಿರುವ ಪ್ರವೀಣ್‌ ಪೀಟರ್‌ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೋಮವಾರ ಪ್ರಚಾರ ನಡೆಸಿದರು. ಕ್ರೈಸ್ತ ಸಮುದಾಯದ ಮುಖಂಡರ ಜತೆಗೆ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸಭೆ ನಡೆಸಿದರು. ಆರ್ಚ್ ಬಿಷಪ್‌ ಪೀಟರ್‌ ಮಚಡೋ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಖಾತೆ ಬದಲಾಯಿಸಿದ್ದಕ್ಕೆ ಶ್ರೀರಾಮುಲು ಅವರಿಗೆ ಬೇಸರವೇನೂ ಆಗಿಲ್ಲ; ಡಾ ಸುಧಾಕರ್

ಇನ್ನೊಂದೆಡೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧ್ಯಯನ ನಡೆಸಲು ರಚಿಸಿರುವ ಕಾಂಗ್ರೆಸ್‌ ಸಮಿತಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. ಸಮಿತಿ ಅಧ್ಯಕ್ಷ ಪ್ರೊ.ಕೆ.ಇ.ರಾಧಾಕೃಷ್ಣ ಈ ನಿಯೋಗದಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ