ಆ್ಯಪ್ನಗರ

ಖಾತೆ ಕ್ಯಾತೆ: ಬೆಂಗಳೂರಿಗೆ ಆಗಮಿಸಿದ ಆನಂದ್ ಸಿಂಗ್; ಬಿಎಸ್‌ವೈ ಭೇಟಿ

ಸಿಎಂ ಸೂಚನೆಯಂತೆ ಬೆಂಗಳೂರಿಗೆ ಆಗಮಿಸಲಿದ್ದು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಆಗುವ ಮೊದಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Vijaya Karnataka Web 11 Aug 2021, 4:36 pm
ಬೆಂಗಳೂರು: ಖಾತೆ ವಿಚಾರವಾಗಿ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು ನೇರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
Vijaya Karnataka Web ಆನಂದ್‌ ಸಿಂಗ್‌, ಬಿಎಸ್‌ವೈ, ಬೊಮ್ಮಾಯಿ
ಆನಂದ್‌ ಸಿಂಗ್‌, ಬಿಎಸ್‌ವೈ, ಬೊಮ್ಮಾಯಿ



ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ತಮ್ಮ ಕ್ಷೇತ್ರದ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನಡೆಸಿದ್ದಾರೆ. ಅಷ್ಟೇ ಅಲ್ಲದೆ, ನಿರೀಕ್ಷಿತ ಖಾತೆ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಆನಂದ್‌ ಸಿಂಗ್‌ ಜೊತೆ ಸಿಎಂ ಬೊಮ್ಮಾಯಿ ನಿರಂತರ ಸಂಪರ್ಕದಲ್ಲಿ ಇದ್ದಾರೆ. ಇದೀಗ ಸಿಎಂ ಸೂಚನೆಯಂತೆ ಬೆಂಗಳೂರಿಗೆ ಆಗಮಿಸಲಿದ್ದು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಆಗುವ ಮೊದಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದಾದ ಬಳಿಕ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಈ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವ ವಿಶ್ವಾಸವನ್ನು ಸಿಎಂ ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ. ‌ಆದರೆ ಈ ಮಾತುಕತೆ ಎಷ್ಟರ ಮಟ್ಟಿಗೆ ಫಲಪ್ರದ ಆಗಲಿದೆ ಎಂಬುದನ್ನು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ