ಆ್ಯಪ್ನಗರ

ನೂತನ ಸಚಿವ ಆನಂದ್ ಸಿಂಗ್ ವಿರುದ್ಧದ ಪ್ರಕರಣಗಳ ವಿವರ ಕೇಳಿದ ಬಿಜೆಪಿ ಹೈಕಮಾಂಡ್!

ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ ನೀಡಿರುವುದು ವಿವಾದಕ್ಕೆ ಗುರಿಯಾಗಿದೆ. ಅರಣ್ಯ ಒತ್ತುವರಿ ಆರೋಪ ಎದುರಿಸುತ್ತಿರುವ ಆನಂದ್‌ ಸಿಂಗ್‌ಗೆ ಅರಣ್ಯ ಖಾತೆಯನ್ನೇ ನೀಡಿರುವುದಕ್ಕೆ ಸ್ವತ: ಹೈ ಕಮಾಂಡ್‌ ಪ್ರಶ್ನೆ ಮಾಡಿದೆ.

Vijaya Karnataka Web 14 Feb 2020, 1:56 pm
ಬೆಂಗಳೂರು: ಅಕ್ರಮ ಗಣಿಗಾರಿಕೆ, ಅರಣ್ಯ ಭೂಮಿ ಅತಿಕ್ರಮಣ ಸೇರಿದಂತೆ ಸಚಿವ ಆನಂದ್ ಸಿಂಗ್ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳ ವಿವರ ನೀಡುವಂತೆ ಸಿಎಂ ಯಡಿಯೂರಪ್ಪಗೆ ಬಿಜೆಪಿ ವರಿಷ್ಠರು ಸೂಚಿಸಿದ್ದಾರೆ. ನೂತನ ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದು ವಿವಾದಕ್ಕೆ ಗುರಿಯಾದ ಹಿನ್ನೆಲೆ ಈ ಬೆಳವಣಿಗೆ ನಡೆದಿದೆ.
Vijaya Karnataka Web anand singh


ಅರಣ್ಯ ಒತ್ತುವರಿ ಆರೋಪವನ್ನು ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನೂತನ ಸಚಿವ ಆನಂದ್‌ ಸಿಂಗ್ ಎದುರಿಸುತ್ತಿದ್ದಾರೆ. ಅಲ್ಲದೆ, 10 ಪ್ರಕರಣಗಳು ಅವರ ವಿರುದ್ಧ ದಾಖಲಾಗಿವೆ. ಈ ಬಗ್ಗೆ ದಿಲ್ಲಿ ಮಟ್ಟದಲ್ಲಿ ಕಾಂಗ್ರೆಸ್ ಪ್ರಶ್ನೆ ಎತ್ತಿದೆ. ಇದು ಬಿಜೆಪಿ ಹೈಕಮಾಂಡ್‌ಗೆ ಇರಿಸು ಮುರಿಸು ತಂದಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸಿಂಗ್ ವಿರುದ್ಧದ ಪ್ರಕರಣಗಳ ಮಾಹಿತಿ ಕೇಳಿರುವ ವರಿಷ್ಠರು, ಇಂಥ ಗಂಭೀರ ಆಪಾದನೆ ಹೊತ್ತವರಿಗೆ ಅರಣ್ಯ ಇಲಾಖೆ ನೀಡಿದ್ದೇಕೆ ಎಂದೂ ಸಿಎಂ ಯಡಿಯೂರಪ್ಪ ಅವರಿಗೆ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಆನಂದ್ ಸಿಂಗ್‌ಗೆ ನೀಡಿರುವ ಅರಣ್ಯ ಖಾತೆ ವಾಪಸ್‌ ಪಡೆಯದಿದ್ದರೆ ಹೋರಾಟ: ಕಾಂಗ್ರೆಸ್ ಎಚ್ಚರಿಕೆ

ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆಯ ವೇಳೆ ಬಿ.ಸಿ. ಪಾಟೀಲ್‌ಗೆ ಅರಣ್ಯ ಖಾತೆ ನೀಡಲಾಗಿತ್ತು. ಆದರೆ, ಅವರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ ನೀಡಿ ಬಿ.ಸಿ. ಪಾಟೀಲ್‌ಗೆ ಕೃಷಿ ಖಾತೆ ನೀಡಿ ಖಾತೆ ಬದಲಾವಣೆ ಮಾಡಿದ್ದರು ಸಿಎಂ ಯಡಿಯೂರಪ್ಪ. ಇದೀಗ ಅಕ್ರಮ ಗಣಿಗಾರಿಕೆ, ಅರಣ್ಯ ಭೂಮಿ ಅತಿಕ್ರಮಣ ಸೇರಿದಂತೆ ಹಲವು ಆರೋಪಗಳನ್ನು ಹೊತ್ತ ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ ನೀಡಿರುವುದಕ್ಕೆ ಬಿಜೆಪಿ ಹೈಕಮಾಂಡ್‌ಗೆ ಇರಿಸು ಮುರಿಸು ತಂದಿದೆ.

ನೂತನ ಸಚಿವರ ಖಾತೆ ಬದಲಾವಣೆ, ಅಸಮಾಧಾನ ತಣಿಸಲು ಬಿಎಸ್‌ವೈ ಯತ್ನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ