ಆ್ಯಪ್ನಗರ

ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಕಾಂಗ್ರೆಸ್‌ ಶಾಸಕ ಅಸಮಾಧಾನ

ಅನ್ನಭಾಗ್ಯ ಯೋಜನೆಯ ಅಕ್ಕಿ ಕಡಿತ ಮಾಡಿರುವುದಕ್ಕೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿದೆ

Vijaya Karnataka Web 10 Jul 2018, 9:26 pm
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿ ಕಡಿತ ಮಾಡಿರುವುದಕ್ಕೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿದೆ.
Vijaya Karnataka Web ಸುಧಾಕರ್‌
ಸುಧಾಕರ್‌


ಬಜೆಟ್‌ ಚರ್ಚೆಗೆ ಚಾಲನೆ ನೀಡಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಡಾ.ಸುಧಾಕರ್‌,''ಹಿಂದಿನ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆ ಗ್ರಾಮೀಣರ ಹಸಿವನ್ನು ನೀಗಿಸಿದೆ. 7 ಕೆಜಿ ಅಕ್ಕಿಯಲ್ಲಿ 2 ಕೆಜಿ ಕಡಿತ ಮಾಡಿರುವುದು ಸರಿಯಲ್ಲ. ಅಕ್ಕಿ ಜತೆಗೆ ಈ ಬಜೆಟ್‌ನಲ್ಲಿ ಎಣ್ಣೆ, ಕಾಳು ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಹೀಗಾಗಿ ಹಿಂದೆ ಕೊಡುತ್ತಿದ್ದಷ್ಟೇ ಅಕ್ಕಿ ನೀಡಿ,'' ಎಂದು ಒತ್ತಾಯಿಸಿದ್ದಾರೆ.

''ಹಿಂದಿನ ಸರಕಾರ ಜಾರಿಗೆ ತಂದ ಕ್ಷೀರಭಾಗ್ಯ ಯೋಜನೆಯಿಂದ 1 ಲಕ್ಷ ಕುಟುಂಬಗಳು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಜತೆಗೆ ಕ್ಷೀರ ಕ್ರಾಂತಿಯಾಗಿದೆ. ಸಿದ್ದರಾಮಯ್ಯ ಅವರು ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು 1 ರೂ.ನಿಂದ 5ರೂ.ಗೆ ಹೆಚ್ಚಳ ಮಾಡಿರುವುದೂ ಜನಸ್ನೇಹಿಯಾಗಿತ್ತು,''ಎಂದು ಅಭಿಪ್ರಾಯಪಟ್ಟರು.

ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬಯಲು ಸೀಮೆಯ ಐದು ಜಿಲ್ಲೆಗಳಲ್ಲಿ ಇದುವರೆಗೆ ಯಾವುದೇ ಮಹತ್ವದ ನೀರಾವರಿ ಯೋಜನೆ ಅನುಷ್ಠಾನವಾಗಲಿಲ್ಲ. ಸದಾನಂದ ಗೌಡರು ಮುಖ್ಯಮಂತ್ರಿಯಾಗಿದ್ದಾಗ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದರು. ಇದಿನ್ನೂ ನಡೆಯುತ್ತಲೇ ಇದೆ. ಹೀಗಾಗಿ ಸರಕಾರ ಹೆಚ್ಚಿನ ಆದ್ಯತೆ ನೀಡಬೇಕು,''ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ