ಆ್ಯಪ್ನಗರ

ಯಾರು ಬೇಕಾದರೂ ಸ್ಪರ್ಧಿಸಬಹುದು: ಎಸ್ ಎಂ ಕೃಷ್ಣ

ನಾನು ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗಬೇಕು. ಇದಕ್ಕಾಗಿ ನಾವೆಲ್ಲ ಕೆಲಸ ಮಾಡುತ್ತೇವೆ ಎಂದು ಎಸ್ ಎಂ ಕೃಷ್ಣ ಹೇಳಿದ್ದಾರೆ.

Vijaya Karnataka Web 12 Mar 2019, 1:19 pm
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಅನುಭವಿ, ಅನನುಭವಿ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. 25 ವರ್ಷ ತುಂಬಿದವರು ಯಾರೂ ಬೇಕಾದರೂ ರಾಜ್ಯಾಂಗದ ಪ್ರಕಾರ ಚುನಾವಣೆಗೆ ಸ್ಪರ್ಧೆ ಮಾಡಬಹುದು. ಅಭ್ಯರ್ಥಿಗಳನ್ನು ತುಲನೆ ಮಾಡಿ ಜನ ಮತ ಚಲಾಯಿಸುತ್ತಾರೆ. ಹಾಗೆಯೇ, ಕುಟುಂಬ ರಾಜಕಾರಣಕ್ಕೆ ರಾಜ್ಯಾಂಗದಲ್ಲಿ ಏನಾದರೂ ನಿರ್ಬಂಧ ಇದೆಯಾ’’ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಪ್ರತಿಕ್ರಿಯಿಸಿ, ಪ್ರಶ್ನಿಸಿದರು.
Vijaya Karnataka Web SM


ಬೆಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘‘ಇಲ್ಲಿ ವ್ಯಕ್ತಿಗಳು ಮುಖ್ಯವಲ್ಲ, ಸಿದ್ಧಾಂತ ಮುಖ್ಯ. ನಾವು ಸಿದ್ಧಾಂತದ ಜತೆಗೆ ಚುನಾವಣೆಗೆ ಹೋಗುತ್ತೇವೆ. ಬೆಂಗಳೂರಿಗೆ ಯಾರ್ಯಾರು ಏನು ಮಾಡಿದ್ದಾರೆ ಎಂದು ಜನರು ತುಲನೆ ಮಾಡಿ ನೋಡುತ್ತಾರೆ ಎಂದರು

ಬಿಜೆಪಿ ಪರ ಪ್ರಚಾರಕ್ಕೆ ಒಪ್ಪಿಗೆ

ಬಿಜೆಪಿ ಪರ ಪ್ರಚಾರ ನಡೆಸಲು ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಒಪ್ಪಿದ್ದಾರೆ. ಪಕ್ಷದ ಹಿರಿಯ ನಾಯಕ ಆರ್. ಅಶೋಕ್ ನಿನ್ನೆ ಕೃಷ್ಣ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸಮಾಲೋಚಿಸಿದ್ದರು. ಅದಕ್ಕೆ ಒಪ್ಪಿಕೊಂಡ ಅವರು, ನಾನು ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗಬೇಕು. ಇದಕ್ಕಾಗಿ ನಾವೆಲ್ಲ ಕೆಲಸ ಮಾಡುತ್ತೇವೆ,’’ ಎಂದು ಹೇಳಿದರು.

ಪ್ರಚಾರದ ವೇಳಾಪಟ್ಟಿ ಸಿದ್ಧಪಡಿಸಿ ಮಾಹಿತಿ ನೀಡಿ ಎಂದು ಅವರು ಹೇಳಿದ್ದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ