ಆ್ಯಪ್ನಗರ

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಧೈರ್ಯ ಮತ್ತು ಸಾಹಸಿ ಮಕ್ಕಳಿಗೆ ನೀಡುವ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

Vijaya Karnataka Web 2 Aug 2018, 4:00 am
ಬೆಂಗಳೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಧೈರ್ಯ ಮತ್ತು ಸಾಹಸಿ ಮಕ್ಕಳಿಗೆ ನೀಡುವ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
Vijaya Karnataka Web Bravery Award


ಪ್ರಾಣದ ಹಂಗು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷ ಣೆ ಮಾಡಿ, ಧೈರ್ಯ ಮತ್ತು ಸಾಹಸ ಪ್ರದರ್ಶಿಸಿರುವ 6 ರಿಂದ 18 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರು ಅರ್ಜಿ ಸಲ್ಲಿಸಬಹುದು. ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಕೆಲದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಆಯ್ಕೆಯಾಗುವ ಮಕ್ಕಳಿಗೆ ನವೆಂಬರ್‌ 14ರಂದು ನಡೆಯುವ ಮಕ್ಕಳ ದಿನನಾಚರಣೆ ಕಾರ್ಯಕ್ರಮದಲ್ಲಿ 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಅರ್ಹರ ಮಕ್ಕಳು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿ ಪಡೆದು 2018ರ ಆಗಸ್ಟ್‌ 31ರೊಳಗೆ ಸಲ್ಲಿಸಬೇಕು ಸಲ್ಲಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ