ಬೆಂಗಳೂರು: ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ( ನೇಮಕಾತಿ) ಅಮೃತ್ ಪೌಲ್ ಅವರನ್ನು ಸಿಐಡಿ ಬಂಧನ ಮಾಡಿದ್ದು, ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.
ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿದ ಡಿಕೆಶಿ
ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ( ನೇಮಕಾತಿ) ಅಮೃತ್ ಪೌಲ್ ಬಂಧನದ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದ ಕುರಿತಾಗಿ ಸದನವನ್ನು ದಾರಿ ತಪ್ಪಿಸಿದ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಈಗ ಅನೇಕರು ಜೈಲಲ್ಲಿ ಕೊಳೆಯುತ್ತಿದ್ದಾರೆ ಎಂದರು.
ಬಾಳೆಹಣ್ಣು ಸಿಕ್ತು ಅಂತಾ ತಿಂದವರನ್ನು ಹಿಡಿದಿದ್ದೀರಿ. ಬಾಳೆಗಿಡ ನೆಟ್ಟವರನ್ನು ಬಿಟ್ಟಿದ್ದೀರಿ. ಸಿಐಡಿ ಬಗ್ಗೆ ಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಕೆಲ ಹಿರಿಯ ಅಧಿಕಾರಿಗಳು ಹಾಜರಾಗಿ ವರದಿ ಸಲ್ಲಿಸುವಂತೆ ಸೂಚಿಸಿದೆ.ಕೇವಲ ಪಿಎಸ್ಐ ಅಕ್ರಮ ನೇಮಕಾತಿ ಮಾತ್ರವಲ್ಲ. ಎಲ್ಲಾ ಇಲಾಖೆಯಲ್ಲಿಯೂ ಅಕ್ರಮ ಆಗಿದೆ ಎಂದು ಆರೋಪಿಸಿದರು.
ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿದ ಡಿಕೆಶಿ
ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ( ನೇಮಕಾತಿ) ಅಮೃತ್ ಪೌಲ್ ಬಂಧನದ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದ ಕುರಿತಾಗಿ ಸದನವನ್ನು ದಾರಿ ತಪ್ಪಿಸಿದ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಈಗ ಅನೇಕರು ಜೈಲಲ್ಲಿ ಕೊಳೆಯುತ್ತಿದ್ದಾರೆ ಎಂದರು.
ಬಾಳೆಹಣ್ಣು ಸಿಕ್ತು ಅಂತಾ ತಿಂದವರನ್ನು ಹಿಡಿದಿದ್ದೀರಿ. ಬಾಳೆಗಿಡ ನೆಟ್ಟವರನ್ನು ಬಿಟ್ಟಿದ್ದೀರಿ. ಸಿಐಡಿ ಬಗ್ಗೆ ಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಕೆಲ ಹಿರಿಯ ಅಧಿಕಾರಿಗಳು ಹಾಜರಾಗಿ ವರದಿ ಸಲ್ಲಿಸುವಂತೆ ಸೂಚಿಸಿದೆ.ಕೇವಲ ಪಿಎಸ್ಐ ಅಕ್ರಮ ನೇಮಕಾತಿ ಮಾತ್ರವಲ್ಲ. ಎಲ್ಲಾ ಇಲಾಖೆಯಲ್ಲಿಯೂ ಅಕ್ರಮ ಆಗಿದೆ ಎಂದು ಆರೋಪಿಸಿದರು.