ಆ್ಯಪ್ನಗರ

ಲಿಂಬಾವಳಿ ಉಸ್ತುವಾರಿ-ತೆಲಂಗಾಣದಲ್ಲಿ ಅರಳಿದ ಕಮಲ

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಉಸ್ತುವಾರಿಯಾಗಿದ್ದ ತೆಲಂಗಾಣದಲ್ಲೂ 4 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ...

Vijaya Karnataka 25 May 2019, 5:00 am
ಬೆಂಗಳೂರು: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಉಸ್ತುವಾರಿಯಾಗಿದ್ದ ತೆಲಂಗಾಣದಲ್ಲೂ 4 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಹೊಸ ದಾಖಲೆ ಮಾಡಿದೆ.
Vijaya Karnataka Web bjp- limbavali


ಕಳೆದ ಲೋಕಸಭಾ ಚುನಾವಣೆಯಲ್ಲಿ 17 ಕ್ಷೇತ್ರಗಳ ಪೈಕಿ ಬಿಜೆಪಿ ಒಂದೇ ಕಡೆ ಗೆಲುವು ಸಾಧಿಸಿತ್ತು. ಜತೆಗೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಪಕ್ಷ ತೀವ್ರ ಹಿನ್ನಡೆ ಅನುಭವಿಸಿತ್ತು.

ಕರೀಂನಗರ ಕ್ಷೇತ್ರದಿಂದ ಬಂಡಿ ಸಂಜಯ್‌, ಅದಿಲಬಾದ್‌ನಿಂದ ಬಾಪುರಾವ್‌, ನಿಜಾಮಬಾದ್‌ನಿಂದ ಧರ್ಮಾಪುರ್‌ ಅರವಿಂದ್‌ ಹಾಗೂ ಸಿಖಂದರಬಾದ್‌ನಿಂದ ಜಿ.ಕಿಷನ್‌ ರೆಡ್ಡಿ ಗೆಲುವು ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಈ ಸಲ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದ ಬಿಜೆಪಿ ವರಿಷ್ಠರು ಆರ್‌ಎಸ್‌ಎಸ್‌ ಹಿನ್ನೆಲೆವುಳ್ಳ ಹಾಗೂ ಅತ್ಯುತ್ತಮ ಸಂಘಟಕನೆಂದು ಪಕ್ಷದಲ್ಲಿ ಹೆಸರುಗಳಿಸಿರುವ ಲಿಂಬಾವಳಿ ಅವರನ್ನು ತೆಲಂಗಾಣ ರಾಜ್ಯಕ್ಕೆ ಉಸ್ತುವಾರಿಯಾಗಿ ನೇಮಿಸಿದ್ದರು.

ಸ್ಥಳೀಯ ನಾಯಕರ ಜತೆ ಸ್ಥಳೀಯ ಹಾಗೂ ರಾಷ್ಟ್ರೀಯ ವಿಷಯಗಳನ್ನಿಟ್ಟುಕೊಂಡು ಗೆಲುವಿಗೆ ಬೇಕಾದ ಕಾರ್ಯತಂತ್ರಗಳನ್ನು ರೂಪಿಸಿದ್ದರು. ಹಿರಿಯರ ಸಲಹೆಯಂತೆ ಗೆಲ್ಲುವ ಕ್ಷೇತ್ರಗಳನ್ನಷ್ಟೇ ಗಮನದಲ್ಲಿಟ್ಟುಕೊಂಡು ಅಖಾಡ ಸಜ್ಜುಗೊಳಿಸಿದ್ದರು. ಜತೆಗೆ ಪ್ರಧಾನಿ ಮೋದಿ ಹಾಗೂ ಪಕ್ಷದ ಅಧ್ಯಕ್ಷ ಅಮಿತ್‌ ಶಾ ಕೂಡ ಬಿರುಸಿನ ಪ್ರಚಾರ ನಡೆಸಿದ್ದರು. ಮೋದಿಯವರ ಅಲೆಯಿಂದಾಗಿ 4 ಕಡೆ ಗೆದ್ದಿದೆ. ಕೋಲಾರದ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿಗೆ ಟಿಕೆಟ್‌ ಕೊಡಿಸುವಲ್ಲಿಯೂ ಲಿಂಬಾವಳಿ ಪಾತ್ರ ಮಹತ್ವದ್ದಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ