ಆ್ಯಪ್ನಗರ

ಖಾಸಗಿ ಬ್ಯಾಂಕ್‌ಗಳಿಂದ ರೈತರ ಶೋಷಣೆ ಸಹಿಸುವುದಿಲ್ಲ: ಮುಖ್ಯಮಂತ್ರಿ

ಆ್ಯಕ್ಸಿಸ್ ಬ್ಯಾಂಕ್ ಹಾಗೂ ರೈತರೊಂದಿಗೆ ನಡೆಯಲಿರುವ ಸಭೆಯಲ್ಲಿ ರೈತರ ಹಿತರಕ್ಷಣೆಗೆ ಬದ್ಧವಾಗಿರುವ ಸರ್ವಸಮ್ಮತ ಸೂತ್ರವನ್ನು ಕಂಡುಹಿಡಿಯುವಂತೆ ಸಿಎಂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Vijaya Karnataka Web 5 Nov 2018, 6:06 pm
ಬೆಂಗಳೂರು: ಖಾಸಗಿ ವಲಯದ ಬ್ಯಾಂಕುಗಳು ರೈತರನ್ನು ಶೋಷಣೆಗೊಳಪಡಿಸಿದಲ್ಲಿ ಸರಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
Vijaya Karnataka Web hdk


ಬೆಳಗಾವಿ ಜಿಲ್ಲೆಯ ರೈತರಿಗೆ ಆ್ಯಕ್ಸಿಸ್ ಬ್ಯಾಂಕ್ ಬಂಧನ ವಾರಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದು, ಕೃಷಿ ಸಾಲದ ಹೆಸರಿನಲ್ಲಿ ಸಾಲ ನೀಡಿದಲ್ಲಿ ಅಂತಹ ರೈತರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಆ್ಯಕ್ಸಿಸ್ ಬ್ಯಾಂಕ್ ಕೃಷಿ ಸಾಲದ ಹೆಸರಿನಲ್ಲಿ ರೈತರಿಗೆ ಶೋಷಣೆ ಮಾಡಿದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಆ್ಯಕ್ಸಿಸ್ ಬ್ಯಾಂಕ್ ಹಾಗೂ ರೈತರೊಂದಿಗೆ ನಡೆಯಲಿರುವ ಸಭೆಯಲ್ಲಿ ರೈತರ ಹಿತರಕ್ಷಣೆಗೆ ಬದ್ಧವಾಗಿರುವ ಸರ್ವಸಮ್ಮತ ಸೂತ್ರವನ್ನು ಕಂಡುಹಿಡಿಯುವಂತೆ ಸಿಎಂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ