ಆ್ಯಪ್ನಗರ

ಬಿಎಸ್‌ವೈಗೆ ಅರುಣ್ ಸಿಂಗ್ ಅಭಯ: ನಾಯಕತ್ವ ಬದಲಾವಣೆ ಚರ್ಚೆಗೆ ಬೀಳುತ್ತಾ ಬ್ರೇಕ್‌?

ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದು, ಈ ಸಂದೇಶ ಕಮಲ ಪಾಳಯದಲ್ಲಿ ಆಂತರಿಕ ಬೇಗುದಿ ಶಮನ ಮಾಡಲಿದೆಯಾ ಎಂಬುವುದನ್ನು ಕಾದುನೋಡಬೇಕಿದೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka 10 Jun 2021, 6:05 pm

ಹೈಲೈಟ್ಸ್‌:

  • ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
  • ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಅರುಣ್ ಸಿಂಗ್ ಹೇಳಿಕೆಯಿಂದ ಬಿಎಸ್‌ವೈಗೆ ಬಲ ಸಿಕ್ಕಂತಾಗಿದೆ
  • ಈ ಸಂದೇಶ ಕಮಲ ಪಾಳಯದಲ್ಲಿ ಆಂತರಿಕ ಬೇಗುದಿ ಶಮನ ಮಾಡಲಿದೆಯಾ ಎಂಬುವುದನ್ನು ಕಾದುನೋಡಬೇಕಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web BJP national general secretary in-charge of Karnataka Arun Singh
ಬೆಂಗಳೂರು: ಕರ್ನಾಟದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಭಯ ನೀಡಿದ್ದು ಯಡಿಯೂರಪ್ಪ ವಿರೋಧಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ನಾಯಕತ್ವ ಬದಲಾವಣೆ ಚರ್ಚೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಅರುಣ್ ಸಿಂಗ್ ಈ ಹೇಳಿಕೆ ನೀಡಿದ್ದು ಬಿಎಸ್‌ವೈಗೂ ಬಲ ಸಿಕ್ಕಂತಾಗಿದೆ.
ನಾಯಕತ್ವ ಬದಲಾವಣೆ ಚರ್ಚೆಯ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಬಿಎಸ್‌ ಯಡಿಯೂರಪ್ಪ ಹೈಕಮಾಂಡ್ ಸೂಚನೆ ನೀಡಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಮೂಲಕ ಹೈಕಮಾಂಡ್‌ಗೆ ಪರೋಕ್ಷ ಸಂದೇಶವನ್ನು ರವಾನಿಸಿದ್ದಾರೆ ಎಂಬ ಆಯಾಮದಲ್ಲಿ ಚರ್ಚೆಗಳು ನಡೆಯುತ್ತಿದ್ದವು.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ರಾಜ್ಯಕ್ಕೆ ಆಗಮಿಸಲಿದ್ದಾರೆ ಅರುಣ್ ಸಿಂಗ್
ಆದರೆ ಬಿಎಸ್‌ವೈ ರಾಜೀನಾಮೆ ಮಾತು ಹಾಗೂ ನಾಯಕತ್ವ ಬದಲಾವಣೆಯ ಬಗ್ಗೆ ಶಾಸಕರ, ಸಚಿವರ ಹೇಳಿಕೆಗೆ ಹೈಕಮಾಂಡ್ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರಲಿಲ್ಲ. ಹೈಕಮಾಂಡ್ ಮೌನ ಕೂಡಾ ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಇದೀಗ ಕೊನೆಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ಅವರು ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ರಾಜ್ಯ ಭೇಟಿಯ ಸಂದರ್ಭದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಸೇರಿದಂತೆ ಹಿರಿಯ ಮುಖಂಡರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಭಿನ್ನಮತೀಯರೂ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಶಾಸಕಾಂಗ ಸಭೆ ಕರೆಯುವಂತೆ ಸೂಚಿಸಲು ಒತ್ತಡ ಹೇರುವ ಸಾಧ್ಯತೆಯೂ ಇದೆ.

ಲಾಕ್‌ಡೌನ್‌ ತೆರವಿನ ಬಳಿಕ ರಾಜ್ಯಕ್ಕೆ ಅರುಣ್‌ ಸಿಂಗ್‌, ಮುಂದಿನ ವಾರ ಸಂಧಾನ ಸಭೆ?
ಆದರೆ ಸದ್ಯಕ್ಕೆ ಅರುಣ್ ಸಿಂಗ್ ನೀಡಿರುವ ಈ ಹೇಳಿಕೆ ಬಿಎಸ್‌ ಯಡಿಯೂರಪ್ಪ ಅವರ ಪಾಲಿಗೆ ಸಕರಾತ್ಮಕವಾಗಿ ಪರಿಣಮಿಸಿದೆ. ಈ ಮೂಲಕ ವಿರೋಧಿ ಬಣ ಅನಿವಾರ್ಯವಾಗಿ ಮೌನಕ್ಕೆ ಶರಣಾಗುವ ಸ್ಥಿತಿ ನಿರ್ಮಾನವಾಗಿದೆ. ಅರುಣ್ ಸಿಂಗ್ ನೀಡಿರುವ ಈ ಸಂದೇಶ ಕಮಲ ಪಾಳಯದಲ್ಲಿ ವಾಸ್ತವದಲ್ಲಿ ಆಂತರಿಕ ಬೇಗುದಿ ಶಮನ ಮಾಡಲು ಸಾಧ್ಯವಾಗುತ್ತಾ ಎಂಬುವುದನ್ನು ಕಾದುನೋಡಬೇಕಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ