ಸಿಡಿದ ಆಶಾ ಕಾರ್ಯಕರ್ತೆಯರು: ವಿವಿಧ ಬೇಡಿಕೆ ಈಡೇರಿಸುವಂತೆ, ಕೆಲಸ ನಿಲ್ಲಿಸಿ ಇಂದಿನಿಂದ ಪ್ರತಿಭಟನೆ
ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸುವುದರ ಜತೆಗೆ, ಕೊರೊನಾ ವಿರುದ್ಧ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್ಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದಾರೆ.
Vijaya Karnataka Web 10 Jul 2020, 7:52 am
ಬೆಂಗಳೂರು: ಜು.10ರ ಶುಕ್ರವಾರದಿಂದ ರಾಜ್ಯಾದ್ಯಂತ ವಿವಿಧ ಬೇಡಿಕೆ ಪೂರೈಸುವಂತೆ ಕೋರಿ ಆಶಾ ಕಾರ್ಯಕರ್ತರ ಪ್ರತಿಭಟನೆ ಆರಂಭವಾಗಲಿದೆ. ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸುವುದರ ಜತೆಗೆ, ಕೊರೊನಾ ವಿರುದ್ಧ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್ಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದಾರೆ.
ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ರಾಜ್ಯದ ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಜತೆಗೆ, ಈ ವರ್ಷದ ಜನವರಿಯಿಂದ ಸುಮಾರು 10 ಮನವಿ ಪತ್ರ ಸಲ್ಲಿಸಿದ್ದರೂ ಕನಿಷ್ಠ ಪಕ್ಷ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವ ಪ್ರಸ್ತಾಪವನ್ನೂ ಸರಕಾರ ಮುಂದಿಟ್ಟಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಹೀಗಾಗಿ , ಅನ್ಯ ಮಾರ್ಗವಿಲ್ಲದೆ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಹೋರಾಟಕ್ಕೆ ಇಳಿಯುತ್ತಿದ್ದಾರೆ. ಇದರಿಂದಾಗುವ ನಷ್ಟ ಹಾಗೂ ಸಮಸ್ಯೆಗೆ ಸರಕಾರವೇ ಹೊಣೆ ಎನ್ನುವ ಎಚ್ಚರಿಕೆಯನ್ನು ನೀಡಿದ್ದಾರೆ. ಕೊರೊನಾ ವಾರಿಯರ್ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ಸಂಬಂಧಿತ ಮಾಹಿತಿ ಕಲೆ ಹಾಕುತ್ತಿದ್ದಾರೆ. ತನ್ನ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇಂದು ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ.
ಶುಕ್ರವಾರದಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಮುಷ್ಕರ!
ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ರಾಜ್ಯದ ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಜತೆಗೆ, ಈ ವರ್ಷದ ಜನವರಿಯಿಂದ ಸುಮಾರು 10 ಮನವಿ ಪತ್ರ ಸಲ್ಲಿಸಿದ್ದರೂ ಕನಿಷ್ಠ ಪಕ್ಷ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವ ಪ್ರಸ್ತಾಪವನ್ನೂ ಸರಕಾರ ಮುಂದಿಟ್ಟಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಹೀಗಾಗಿ , ಅನ್ಯ ಮಾರ್ಗವಿಲ್ಲದೆ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಹೋರಾಟಕ್ಕೆ ಇಳಿಯುತ್ತಿದ್ದಾರೆ. ಇದರಿಂದಾಗುವ ನಷ್ಟ ಹಾಗೂ ಸಮಸ್ಯೆಗೆ ಸರಕಾರವೇ ಹೊಣೆ ಎನ್ನುವ ಎಚ್ಚರಿಕೆಯನ್ನು ನೀಡಿದ್ದಾರೆ. ಕೊರೊನಾ ವಾರಿಯರ್ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ಸಂಬಂಧಿತ ಮಾಹಿತಿ ಕಲೆ ಹಾಕುತ್ತಿದ್ದಾರೆ. ತನ್ನ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇಂದು ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ.
ಶುಕ್ರವಾರದಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಮುಷ್ಕರ!