ಆ್ಯಪ್ನಗರ

ಆಶಾ ಕಾರ್ಯಕರ್ತರಿಗೆ 12,000 ಗೌರವ ಧನ, ಸಿಎಂ ಜೊತೆ ಚರ್ಚಿಸಿ ತೀರ್ಮಾನ - ಶ್ರೀರಾಮುಲು ಭರವಸೆ

ಸಚಿವರ ಭರವಸೆಗೆ ಬಗ್ಗದ ಆಶಾ ಕಾರ್ಯಕರ್ತರು ಮುಷ್ಕರ ಮುಂದುವರಿಸಲು ತೀರ್ಮಾನಿಸಿದ್ದಾರೆ. ನಮ್ಮ ಬೇಡಿಕೆಗಳಿಗೆ ಸರಕಾರದಿಂದ ಲಿಖಿತವಾಗಿ ಸ್ಪಷ್ಟ ಸ್ಪಂದನೆ ಸಿಗಬೇಕು. ಅಲ್ಲಿಯವರೆಗೆ ಸೇವೆಗೆ ಹಾಜರಾಗದೆ ಮುಷ್ಕರ ಮುಂದುವರಿಸುತ್ತೇವೆ ಎಂದು ಕಾರ್ಯಕರ್ತರು ಹೇಳಿದ್ದಾರೆ.

Vijaya Karnataka 29 Jul 2020, 9:27 pm

ಬೆಂಗಳೂರು: ಮಾಸಿಕ 12 ಸಾವಿರ ರೂ. ಗೌರವಧನ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವ ಶ್ರೀರಾಮುಲು ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು.
Vijaya Karnataka Web B Sriramulu


ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸಹಯೋಗದೊಂದಿಗೆ ಮೌರ್ಯ ವೃತ್ತದಲ್ಲಿ ಕೈಗೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಸಚಿವ ಶ್ರೀರಾಮುಲು, ಆಶಾ ಕಾರ್ಯಕರ್ತೆಯರ ಮನವಿ ಸ್ವೀಕರಿಸಿದರು.

ಬಳಿಕ ಮಾತನಾಡಿದ ಸಚಿವರು, "ಕೇಂದ್ರ ಮತ್ತು ರಾಜ್ಯ ಸರಕಾರಗಳು ಪ್ರತ್ಯೇಕವಾಗಿ ನೀಡುತ್ತಿರುವ ಗೌರವಧನ ಒಟ್ಟುಗೂಡಿಸಿ ಮಾಸಿಕ 12 ಸಾವಿರ ರೂ. ನೀಡಿದರೆ ಸರಕಾರಕ್ಕೆ ಯಾವುದೇ ಹೊರೆಯಾಗುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿಎಂ ಕೂಡ ಆಶಾ ಕಾರ್ಯಕರ್ತೆಯರು ಸಾಕಷ್ಟು ಶ್ರಮದಾಯಕ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ರೀತಿಯ ಸಹಕಾರ, ಬೆಂಬಲ ನೀಡೋಣ ಎಂದು ತಿಳಿಸಿದ್ದಾರೆ. ಹೀಗಾಗಿ, ಅವರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು,’’ ಎಂದರು.

ಕೊರೊನಾ ಮಧ್ಯೆ ಬುಧವಾರ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಾಂಗ್ರೆಸ್‌ ಬೆಂಬಲ

ಮುಷ್ಕರ ಮುಂದುವರಿಕೆ

"
ಮಂಗಳವಾರ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದೆವು. ಬುಧವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೆವು. ಆದರೆ ಸಿಎಂ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಹೀಗಾಗಿ, ಸಿಎಂ ಮನೆಗೆ ಮುತ್ತಿಗೆ ಹಾಕುವುದನ್ನು ಕೈಬಿಟ್ಟು ಮೌರ್ಯ ವೃತ್ತದಲ್ಲಿಅನಿರ್ಧಿಷ್ಟಾವಧಿ ಕಾಲದ ಮುಷ್ಕರ ಆರಂಭಿಸಿದೆವು. ಬುಧವಾರ ಸಚಿವ ಶ್ರೀರಾಮುಲು ಅವರು ಬಂದು ಮನವಿ ಸ್ವೀಕರಿಸಿದರು. ಆದರೆ ಅವರು ಕೂಡ ಕೇವಲ ಭರವಸೆ ನೀಡಿದರು. ಆದರೆ, ನಮಗೆ ಎಷ್ಟು ದಿನದಲ್ಲಿ ಬೇಡಿಕೆ ಈಡೇರುತ್ತದೆ ಎಂಬ ಬಗ್ಗೆ ನಿಖರವಾಗಿ ತಿಳಿಸಲಿಲ್ಲ. ಹೀಗಾಗಿ ನಾವು ಮೌರ್ಯ ವೃತ್ತದಲ್ಲಿನ ಪ್ರತಿಭಟನೆ ಮಾತ್ರ ಕೈ ಬಿಟ್ಟಿದ್ದೇವೆ. ಆದರೆ, ನಮ್ಮ ಬೇಡಿಕೆಗಳಿಗೆ ಸರಕಾರದಿಂದ ಲಿಖಿತವಾಗಿ ಸ್ಪಷ್ಟ ಸ್ಪಂದನೆ ಸಿಗಬೇಕು. ಅಲ್ಲಿಯವರೆಗೆ ಸೇವೆಗೆ ಹಾಜರಾಗದೆ ಮುಷ್ಕರ ಮುಂದುವರಿಸುತ್ತೇವೆ,’’ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಹಾಗೂ ಸದಸ್ಯ ಶ್ರೀಕಾಂತ್‌ ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ