ಆ್ಯಪ್ನಗರ

ಅಶೋಕ್‌ ಗಸ್ತಿ ಪತ್ನಿ ಸೇರಿ ರಾಜ್ಯಸಭೆ ಸ್ಥಾನಕ್ಕೆ ಮೂವರ ಹೆಸರು ಶಿಫಾರಸು

ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಬೇಕು. ಮಸ್ಕಿಯಲ್ಲಿ ಪ್ರತಾಪ್‌ಗೌಡ ಪಾಟೀಲ್‌ ಅವರಿಗೆ ಟಿಕೆಟ್‌ ನೀಡಲು ಸಮಸ್ಯೆಯಿಲ್ಲ. ಉಳಿದ 2 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಶೋಧಕ್ಕೆ ಸಮೀಕ್ಷೆ ಕೈಗೊಳ್ಳಬೇಕು

Vijaya Karnataka Web 5 Nov 2020, 11:16 pm
ಬೆಂಗಳೂರು: ಅಶೋಕ್‌ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಸ್ಥಾನಕ್ಕೆ ಗಸ್ತಿ ಪತ್ನಿ ಸುಮಾ ಸೇರಿ ನಾಲ್ವರ ಹೆಸರು ಶಿಫಾರಸು ಮಾಡಲು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
Vijaya Karnataka Web ಬಿಜೆಪಿ
ಬಿಜೆಪಿ


ಸಿಎಂ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಕಟೀಲ್‌ ಸಮ್ಮುಖ ಮಂಗಳೂರಿನಲ್ಲಿ ಗುರುವಾರ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು. ಅದರಂತೆ ಸುಮಾ ಗಸ್ತಿ, ವಕೀಲ ಶಂಕರಪ್ಪ, ಮಾಜಿ ಶಾಸಕ ನಿರ್ಮಲ್‌ ಕುಮಾರ್‌ ಸುರಾನ ಹೆಸರನ್ನು ರಾಜ್ಯ ಕಮಿಟಿಯಿಂದ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲು ನಿರ್ಧರಿಸಲಾಯಿತು. ಜತೆಗೆ ಹಿಂದುಳಿದ ವರ್ಗಕ್ಕೆ ಸೇರಿದ ಮತ್ತೊಬ್ಬ ಸಂಭಾವ್ಯರ ಹೆಸರನ್ನು ಕಳುಹಿಸಿ ಕೊಡುವ ನಿಲುವಿಗೆ ಬರಲಾಯಿತು. ಈ ನಿಟ್ಟಿನಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.

ಅಶೋಕ್‌ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್‌ 11ರಂದು ಅಧಿಸೂಚನೆ ಪ್ರಕಟವಾಗಲಿದೆ.

ಅಭ್ಯರ್ಥಿ ಶೋಧಕ್ಕೆ ಸಮೀಕ್ಷೆ

ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಸಿದ್ಧತೆ ಪ್ರಾರಂಭಿಸಬೇಕು. ಮಸ್ಕಿಯಲ್ಲಿ ಪ್ರತಾಪ್‌ಗೌಡ ಪಾಟೀಲ್‌ ಅವರಿಗೆ ಟಿಕೆಟ್‌ ನೀಡಲು ಸಮಸ್ಯೆಯಿಲ್ಲ. ಉಳಿದ 2 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಶೋಧಕ್ಕೆ ಸಮೀಕ್ಷೆ ಕೈಗೊಳ್ಳಬೇಕು ಎಂದು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಶಿರಾ, ಆರ್‌ಆರ್ ‌ನಗರ ಉಪ ಚುನಾವಣೆ ಹಾಗೂ ಶಿಕ್ಷಕ-ಪದವೀಧರ ಕ್ಷೇತ್ರಗಳ ಚುನಾವಣೆ ಸಂಬಂಧದ ವರದಿಯನ್ನೂ ಸಭೆಯಲ್ಲಿ ಅವಲೋಕಿಸಲಾಯಿತು. ಪಕ್ಷದ ವೀಕ್ಷಕರು ನೀಡಿರುವ ಮಾಹಿತಿ ಪ್ರಕಾರ ಈ ಚುನಾವಣೆಗಳಲ್ಲಿ ಉತ್ತಮ ಜನಬೆಂಬಲ ದೊರಕಿರುವುದು ಮನದಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು ಎಂದು ಗೊತ್ತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ