ಆ್ಯಪ್ನಗರ

ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಪಕ್ಕಾ! ಸುಳಿವು ನೀಡಿದ ಆರ್. ಅಶೋಕ್

ನಾನು ನಾನು ಎಂದು ಹೇಳುವವರು ಯಾರೂ ಮುಂದಿನ ಸಿಎಂ ಆಗುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು ರಾಷ್ಟ್ರೀಯ ನಾಯಕರು ಅವರ ಮೂಲಗಳಿಂದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 23 Jul 2021, 4:04 pm

ಹೈಲೈಟ್ಸ್‌:

  • ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡುವುದು ಬಹುತೇಕ ಖಚಿತಗೊಂಡಿದೆ
  • ಈ ಬಗ್ಗೆ ಸ್ವತಃ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ
  • ನಾನು ನಾನು ಎಂದು ಹೇಳುವವರು ಯಾರೂ ಮುಂದಿನ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಕಂದಾಯ ಸಚಿವರು ಹೇಳಿದ್ದಾರೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web R Ashok
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಬಹುತೇಕ ಖಚಿತಗೊಂಡಿದೆ. ಈ ಬಗ್ಗೆ ಸ್ವತಃ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, "ನಾನು ನಾನು ಎಂದು ಹೇಳುವವರು ಯಾರೂ ಮುಂದಿನ ಮುಖ್ಯಮಂತ್ರಿ ಆಗುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು ರಾಷ್ಟ್ರೀಯ ನಾಯಕರು ಅವರ ಮೂಲಗಳಿಂದ ಮಾಹಿತಿ ಪಡೆಯುತ್ತಿದ್ದಾರೆ," ಎಂದರು.
ಸಿಎಂ ಸ್ಥಾನಕ್ಕೆ ಯಾರು ಅಭ್ಯರ್ಥಿ ಎಂಬ ಪ್ರಶ್ನೆಗೆ, ಮಂತ್ರಿಮಂಡಲದಲ್ಲಿ ಯಾರು ಸಕ್ರಿಯರಾಗಿ ಇದ್ದಾರೆ ಅವರ ಹೆಸರು ಇದೆ. ಯಾರು ಯಾರು ಶಾಸಕರಿದ್ದಾರೆ ಅವರ ಹೆಸರು ಕೂಡಾ ಇದೆ.‌ ಆದರೆ ಸದ್ಯ ಸಿಎಂ ಖರ್ಚಿ ಖಾಲಿ ಇಲ್ಲ. ಕರ್ನಾಟಕದ ಹಿತ ದೃಷ್ಟಿಯಿಂದ ರಾಜಕೀಯವಾಗಿ ನಿರ್ಧಾರ ಕೈಗೊಳ್ಳುತ್ತಾರೆ," ಎಂದು ಹೇಳಿದರು.

ರಾಜೀನಾಮೆ ಗದ್ದಲದ ನಡುವೆಯೂ ಬಿಎಸ್‌ವೈ ಬೆಂಗಳೂರು ಸಿಟಿ ರೌಂಡ್ಸ್: ಅಭಿವೃದ್ಧಿ ಕಾರ್ಯಗಳ ವೀಕ್ಷಣೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಜುಲೈ 25 ರಂದು ವರಿಷ್ಠರು ಏನು ಸೂಚನೆ ನೀಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಆದರೆ ಬಿಎಸ್ ಯಡಿಯೂರಪ್ಪ ಯಾವ ದಿನದಂದು ರಾಜೀನಾಮೆ ಕೊಡುತ್ತಾರೆ ಎಂಬುವುದು ಇನ್ನು ಅಧಿಕೃತಗೊಂಡಿಲ್ಲ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ