ಆ್ಯಪ್ನಗರ

ಬಿಎಸ್‌ವೈ ಆಹ್ವಾನಿಸಿ ಸಂತೋಷ್‌ಗೆ ಟಾಂಗ್‌ ಕೊಟ್ಟ ಅಶೋಕ

ಬಿಬಿಎಂಪಿ ಮೇಯರ್‌ ಚುನಾವಣೆ ವಿಚಾರದಲ್ಲಿ ಪಕ್ಷಕ್ಕೆ ಆದ ಸೋಲಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌...

Vijaya Karnataka 3 Oct 2018, 5:00 am
ಬೆಂಗಳೂರು: ಬಿಬಿಎಂಪಿ ಮೇಯರ್‌ ಚುನಾವಣೆ ವಿಚಾರದಲ್ಲಿ ಪಕ್ಷಕ್ಕೆ ಆದ ಸೋಲಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಟೀಕೆಗೆ ತಿರುಗೇಟು ನೀಡಲು ಯತ್ನಿಸಿರುವ ಮಾಜಿ ಡಿಸಿಎಂ ಆರ್‌.ಅಶೋಕ್‌, ಪದ್ಮನಾಭನಗರದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಆಹ್ವಾನಿಸಿ ಸಾಮರ್ಥ್ಯ‌ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
Vijaya Karnataka Web BJP- R ashok


'ಫೇಸ್‌ಬುಕ್‌ನಲ್ಲಿ ಸಂತೋಷ್‌ ಸ್ಟೇಟಸ್‌ ಹಾಕಿದ್ದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅಶೋಕ್‌ ಪರ ನಿಂತಿದ್ದರು. ಬಹಿರಂಗವಾಗಿ ಎಂದೂ ಅಶೋಕ್‌ ಸಮರ್ಥನೆ ಮಾಡದ ಯಡಿಯೂರಪ್ಪ , ಸಂತೋಷ್‌ ಕಾರಣಕ್ಕಾಗಿ ಬೆಂಬಲಕ್ಕೆ ನಿಂತಿದ್ದರು. ಇದೀಗ ಶತ್ರುವಿನ ಶತ್ರು ಮಿತ್ರ ಎಂಬ ನೀತಿ ಪಾಲಿಸಲು ಮುಂದಾಗಿರುವ ಅಶೋಕ್‌, ಯಡಿಯೂರಪ್ಪ ಜತೆಗಿನ ಸಂಬಂಧ ಗಟ್ಟಿ ಮಾಡಿಕೊಳ್ಳಲು ಅವರನ್ನು ತಮ್ಮ ಕ್ಷೇತ್ರದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಆಹ್ವಾನಿಸಿ ತಮ್ಮ ಬೆಂಬಲಕ್ಕೂ ಜನ ಇದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಚುನಾವಣೆಗೆ ಮುನ್ನುಡಿ
ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಇದು ಕೇವಲ ಸ್ವಚ್ಛತಾ ಕಾರ್ಯಕ್ರಮವಲ್ಲ. ಲೋಕಸಭಾ ಚುನಾವಣೆ ತಯಾರಿಗೆ ಮುನ್ನುಡಿ. ಈ ಹಿನ್ನೆಲೆಯಲ್ಲಿ ಅಶೋಕ್‌ ಅವರ ಪದ್ಮನಾಭನಗರ ಕ್ಷೇತ್ರಕ್ಕೆ ಬಂದಿದ್ದೇನೆ. ಲೋಕಸಭಾ ಚುನಾವಣೆಗೆ ಪಕ್ಷದ ವತಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಈಗಿರುವ 17 ಸಂಸದರಿಗೆ ಟಿಕೆಟ್‌ ನೀಡಲಾಗುತ್ತದೆ. ರಾಜ್ಯಕ್ಕೆ ಅಮಿತ್‌ ಶಾ ಬರುವ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ