ಆ್ಯಪ್ನಗರ

ಮಂತ್ರಿ ಸ್ಥಾನದ ಆಕಾಂಕ್ಷಿಗಳು ದಿಲ್ಲಿಗೆ ದೌಡು

ಆಷಾಢದ ಬಳಿಕ ಸಂಪುಟ ವಿಸ್ತರಣೆ ನಿಚ್ಚಳವಾದ್ದರಿಂದ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು ದಿಲ್ಲಿಗೆ ದೌಡಾಯಿಸಿದ್ದಾರೆ.

Vijaya Karnataka 7 Aug 2018, 9:51 am
ಬೆಂಗಳೂರು: ಆಷಾಢದ ಬಳಿಕ ಸಂಪುಟ ವಿಸ್ತರಣೆ ನಿಚ್ಚಳವಾದ್ದರಿಂದ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು ದಿಲ್ಲಿಗೆ ದೌಡಾಯಿಸಿದ್ದಾರೆ.
Vijaya Karnataka Web Congress


ಎಂ.ಬಿ. ಪಾಟೀಲ್‌ ಪ್ರತ್ಯೇಕವಾಗಿ ದಿಲ್ಲಿಗೆ ತೆರಳಿದ್ದರೆ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಶಾಸಕರ ತಂಡವೊಂದು ದಿಲ್ಲಿ ತಲುಪಿಕೊಂಡಿದೆ. ಜಾರಕಿಹೊಳಿ ಉಸ್ತುವಾರಿಯಲ್ಲಿ ಇತ್ತೀಚೆಗೆ ಅಜ್ಮೇರ್‌ ದರ್ಗಾಕ್ಕೆ ತೆರಳಿದ್ದ ಶಾಸಕರೇ ಈ ಗುಂಪಿನಲ್ಲಿದ್ದಾರೆ. ಈ ಶಾಸಕರ ಪೈಕಿ ರಹೀಂ ಖಾನ್‌, ನಾಗೇಂದ್ರ, ನಾರಾಯಣರಾವ್‌ ಮತ್ತಿತರರು ಮಂತ್ರಿಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

ಪಕ್ಷದ ಸಂಸದರು ಹಾಗೂ ಹಿರಿಯ ನಾಯಕರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಒತ್ತಡ ತರುವುದು ಈ ಶಾಸಕರ ಕಾರ್ಯಸೂಚಿ. ರಮೇಶ ಜಾರಕಿಹೊಳಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಬಳಗಕ್ಕೆ ಸೇರಿದವರಾಗಿದ್ದಾರೆ. ಇವರೊಂದಿಗೆ ದಿಲ್ಲಿಗೆ ಹೋಗಿರುವ ಶಾಸಕರೂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಈ ಬೆಳವಣಿಗೆ ಕುತೂಹಲ ಕೆರಳಿಸಿದೆ.

ಈ ಮಧ್ಯೆ ಮಹಿಳಾ ಸಬಲೀಕರಣ ಸಮಾವೇಶದಲ್ಲಿ ಭಾಗವಹಿಸುವ ಉದ್ದೇಶದಿಂದ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮೇ ಹೆಬ್ಬಾಳ್ಕರ್‌ ಅವರೂ ದಿಲ್ಲಿಗೆ ತೆರಳಿದ್ದು, ಬುಧವಾರದಂದು ರಾಹುಲ್‌ ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ