ಆ್ಯಪ್ನಗರ

ಗೋ ಹತ್ಯೆ ನಿಲ್ಲಿಸಿಯೇ ನಿಲ್ಲಿಸುತ್ತೇವೆ: ಬಸವರಾಜ್‌ ಬೊಮ್ಮಾಯಿ

"ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೇಂದ್ರ ಸರ್ಕಾರ 60ರ ದಶಕದಲ್ಲಿ ಜಾರಿ ಮಾಡಿದೆ. ಇದರಲ್ಲಿ ಏನೂ ಹೊಸದಿಲ್ಲ. ನಮ್ಮ ರಾಜ್ಯ ಮಾತ್ರವಲ್ಲದೆ ಬೇರೆ ರಾಜ್ಯದಲ್ಲಿಯೂ ಗೋ ಹತ್ಯೆ ಜಾರಿಯಲ್ಲಿದೆ" - ಬಸವರಾಜ್‌ ಬೊಮ್ಮಾಯಿ, ಗೃಹ ಸಚಿವ.

Vijaya Karnataka Web 9 Sep 2019, 5:20 pm
ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್‌, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮತ್ತೆ ಗೋ ಹತ್ಯೆ ನಿಷೇಧ ಚರ್ಚೆ ಆರಂಭವಾಗಿದೆ. ರಾಜ್ಯದಲ್ಲಿ ಗೋ ಹತ್ಯೆಯನ್ನು ನಿಲ್ಲಿಸಿಯೇ ನಿಲ್ಲಿಸುತ್ತೇವೆ. ಇದರಲ್ಲಿ ಎರಡು ಮಾತಿಲ್ಲ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ವಿಧಾನಸೌಧದಲ್ಲಿ ಸೋಮವಾರ ಹೇಳಿದರು.
Vijaya Karnataka Web Basavaraj Bommai


“ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೇಂದ್ರ ಸರ್ಕಾರ 60ರ ದಶಕದಲ್ಲಿ ಜಾರಿ ಮಾಡಿದೆ. ಇದರಲ್ಲಿ ಏನೂ ಹೊಸದಿಲ್ಲ. ನಮ್ಮ ರಾಜ್ಯ ಮಾತ್ರವಲ್ಲದೆ ಬೇರೆ ರಾಜ್ಯದಲ್ಲಿಯೂ ಗೋ ಹತ್ಯೆ ಜಾರಿಯಲ್ಲಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಆದರೆ ಗೋಹತ್ಯೆ ನಿಲ್ಲಿಸುವುದರಲ್ಲಿ ಎರಡು ಮಾತಿಲ್ಲ,” ಎಂಬುದಾಗಿ ಬಸವರಾಜ ಬೊಮ್ಮಾಯಿ ವಿವರಿಸಿದರು.

ಇನ್ನು ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, “ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಕೊಡುವ ಬಗ್ಗೆ ತೀರ್ಮಾನ ‌ಆಗಿದೆ. ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು,” ಎಂದರು.

ಗೋ ಹತ್ಯೆ ತಡೆಗೆ ಶ್ರೀ ಶಿವಸುಜ್ಞಾನತೀರ್ಥರ ಆಗ್ರಹ

ಇದೇ ವೇಳೆ ಸಂಚಾರ ನಿಯಮಗಳ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಅವರು, ಭಾನುವಾರ ಮುಖ್ಯಮಂತ್ರಿಗಳು ರಸ್ತೆಗಳ ಗುಂಡಿ ಮುಚ್ಚಲು ಬಿಬಿಎಂಪಿಗೆ ಸೂಚನೆ ಕೊಟ್ಟಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಗುಂಡಿ ಮುಚ್ಚುವ ಕಾರ್ಯವನ್ನು ಬಿಬಿಎಂಪಿ ಕೈಗೆತ್ತಿಕೊಂಡಿದೆ. ದಂಡ ವಿಧಿಸುವುದು ಕೇಂದ್ರದಿಂದ ಮಾಡಿರುವ ನಿಯಮ. ಯುಪಿಎ ಇದ್ದಾಗ ಮೊದಲು ಇದರ ಪ್ರಸ್ತಾಪ ಬಂತು. ನಂತರ ಜಂಟಿ ಸಮಿತಿಗೆ ಪ್ರಸ್ತಾಪ ಹೋಗಿ ಎಲ್ಲ ಪಕ್ಷದವರೂ ಸೇರಿ ಸಂಸತ್‌ನಲ್ಲಿ ಈ ಕಾಯ್ದೆ ಪಾಸ್ ಮಾಡಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ಗೋಹತ್ಯೆ ತಡೆಯಲು ವಿಫಲ; ವಿಎಚ್‌ಪಿ ತೀವ್ರ ಅಸಮಾಧಾನ
ಮುಂದುವರಿದು ಮಾತನಾಡಿದ ಅವರು “ಕೇಂದ್ರ ಸರ್ಕಾರಕ್ಕೆ ಜನರ ಭಾವನೆ ಬಗ್ಗೆ ಮನವರಿಕೆ ಮಾಡಲಾಗುವುದು. ದುಬಾರಿ ದಂಡವನ್ನು ಜನ ವಿರೋಧಿಸುತ್ತಿದ್ದಾರೆ ಎಂಬುದನ್ನು ಮುಖ್ಯಮಂತ್ರಿಗಳ ಮೂಲಕ ಕೇಂದ್ರದ ಸಚಿವರಿಗೆ ಗಮನಕ್ಕೆ ತರಲಾಗುವುದು,” ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ