ಆ್ಯಪ್ನಗರ

ತನ್ವೀರ್ ಸೇಠ್ ಕೊಲೆ ಯತ್ನ ಆರೋಪಿಗಳಿಗೆ ಶಿಕ್ಷೆಯಾಗ್ಲಿ; ಕಲ್ಬುರ್ಗಿ, ಗೌರಿ ಹತ್ಯೆ ಬಗ್ಗೆನೂ ಸಿಎಂ ತಿಳಿದುಕೊಳ್ಳಲಿ- ಗುಂಡೂರಾವ್

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಯಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಲ್ಲದೆ ಗೌರಿ ಲಂಕೇಶ್, ಕಲ್ಬುರ್ಗಿ ಹತ್ಯೆ ಪ್ರಕರಣಗಳ ಬಗ್ಗೆ ಕೂಡಾ ಸಿಎಂ ತಿಳಿದುಕೊಳ್ಳಲಿ ಎಂದರು.

Vijaya Karnataka Web 21 Nov 2019, 4:37 pm
ಬೆಂಗಳೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗಬೇಕು ಜೊತೆಗೆ ವಿಚಾರವಾದಿ ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತಾಗಿಯೂ ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿದುಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Vijaya Karnataka Web attack on congress mla tanveer sait kpcc president dinesh gundu rao
ತನ್ವೀರ್ ಸೇಠ್ ಕೊಲೆ ಯತ್ನ ಆರೋಪಿಗಳಿಗೆ ಶಿಕ್ಷೆಯಾಗ್ಲಿ; ಕಲ್ಬುರ್ಗಿ, ಗೌರಿ ಹತ್ಯೆ ಬಗ್ಗೆನೂ ಸಿಎಂ ತಿಳಿದುಕೊಳ್ಳಲಿ- ಗುಂಡೂರಾವ್


ತನ್ವೀರ್ ಸೇಠ್ ಧ್ವನಿಪೆಟ್ಟಿಗೆ ಡ್ಯಾಮೇಜ್!: ಡಾ. ಉಪೇಂದ್ರ ಶೆಣೈ

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರ ತನ್ವೀರ್ ಸೇಠ್ ಹತ್ಯೆಗೆ ಯತ್ನ ಮಾಡಿದವರ ವಿರುದ್ಧ ಖಡಾಖಂಡಿತವಾಗಿ ಕ್ರಮ ಕೈಗೊಳ್ಳಬೇಕು. ಯಾವುದೇ ವ್ಯಕ್ತ, ಪಕ್ಷ, ಸಂಘಟನೆಯಾದರೂ ಸರಿಯೇ ಅವರ ವಿರುದ್ಧ ಕ್ರಮ ಜರಗಬೇಕು. ಆದರೆ ಇದರಲ್ಲಿ ರಾಜಕೀಯ ಮಾಡಬಾರದು ಎಂದರು.

ಎಸ್‌ಡಿಪಿಐ ಹಾಗೂ ಪಿಎಫ್‌ಐ ವಿರುದ್ಧ ಪ್ರಕರಣಗಳನ್ನು ವಾಪಸ್ ಪಡೆದಿರುವುದು ಇಂದು ತನ್ವೀರ್ ಸೇಠ್ ಮೇಲೆ ನಡೆದ ಹತ್ಯೆ ಯತ್ನಕ್ಕೆ ಕಾರಣ ಎಂದು ಸಿಎಂ ಬಿಎಸ್‌ವೈ ಹೇಳಿಕೆ ನೀಡಿದ್ದರು. ಸಿಎಂ ಹೇಳಿಕೆ ವಿರೋಧಿಸಿದ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ವಿರುದ್ಧ ಸಿಎಂ ನೀಡಿದ ಹೇಳಿಕೆ ಸರಿಯಲ್ಲ. ತನ್ವೀರ್ ಸೇಠ್ ಪ್ರಕರಣದಲ್ಲಿ ಸ್ಪಷ್ಟವಾದ ತನಿಖೆಯಾಗಲಿ. ಚುನಾವಣೆ ಸಂದರ್ಭದಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಜವಾಬ್ದಾರಿಯಿಂದ ವರ್ತಿಸಬೇಕು ಹಾಗೂ ಪ್ರಕರಣದ ಹಿನ್ನೆಲೆಯನ್ನು ಅರಿತು ಸಿಎಂ ಮಾತನಾಡಬೇಕು ಎಂದಿದ್ದಾರೆ.

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಕೆಜೆ ಜಾರ್ಜ್ ಕ್ಷಮೆಯಾಚನೆಗೆ ದಿನೇಶ್ ಒತ್ತಾಯ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ ಜಾರ್ಜ್‌ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಜೆ ಜಾರ್ಜ್ ಕೈವಾಡವಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಹಾಗೂ ಜಾರ್ಜ್ ರಾಜೀನಾಮೆಗೂ ಬಿಜೆಪಿ ಒತ್ತಾಯಿಸಿತ್ತು. ಬಿಜೆಪಿ ಒತ್ತಾಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಇದೀಗ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಇದಕ್ಕೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಬಿಜೆಪಿ ಕೆ ಜೆ ಜಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರಿಗೆ ತಪ್ಪು ಮಾಹಿತಿ ನೀಡಿದೆ. ಜೊತೆಗೆ ಕೆ.ಜೆ ಜಾರ್ಜ್ ಅವರಿಗೂ ವೈಯಕ್ತಿಕವಾಗಿ ನೋವು ಮಾಡುವುದರ ಜೊತೆಗೆ ಮಾನಸಿಕ ಹಿಂಸೆ ನೀಡುವಂತಹಾ ಕೆಲಸ ಮಾಡಿದೆ. ಈ ಕಾರಣಕ್ಕಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ