ಆ್ಯಪ್ನಗರ

ಆಡಿಯೊ ಮೂಲ ಹುಡುಕಲು ಸಿಬಿಐಗೆ ವಹಿಸಿ: ರವಿ

ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಪಟ್ಟ ಆಡಿಯೊ ಎಲ್ಲಿಂದ ಬಿಡುಗಡೆಯಾಗಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಎಚ್‌ಡಿ...

Vijaya Karnataka 5 Dec 2018, 5:00 am
ಬೆಂಗಳೂರು: ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಪಟ್ಟ ಆಡಿಯೊ ಎಲ್ಲಿಂದ ಬಿಡುಗಡೆಯಾಗಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಸಿ.ಟಿ.ರವಿ ಆಗ್ರಹಿಸಿದ್ದಾರೆ.
Vijaya Karnataka Web ct


ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಬಿಂಬಿಸಿ ಅನುಕಂಪ ಗಿಟ್ಟಿಸುವ ತಂತ್ರಗಾರಿಕೆಯನ್ನು ಸರಕಾರ ರೂಪಿಸುತ್ತಾ ಬಂದಿದೆ. ಆಡಿಯೊ ನಕಲಿ ಎಂಬ ಗುಮಾನಿ ದಟ್ಟವಾಗಿದೆ. ಈ ಆಡಿಯೋ ಎಲ್ಲಿಂದ ಬಹಿರಂಗವಾಗಿದೆ ಎಂಬ ಪ್ರಶ್ನೆಗೆ ಉತ್ತರ ದೊರೆತರೆ ಇದರ ಹಿಂದಿರುವ ಉದ್ದೇಶ ಏನೆಂಬುದು ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿಗೆ ಗುಪ್ತಚರ ವಿಭಾಗದಿಂದ ಎಲ್ಲ ಮಾಹಿತಿ ದೊರೆಯುತ್ತದೆ. ಈ ಆಡಿಯೋ ಎಲ್ಲಿಂದ ಬಿಡುಗಡೆಯಾಗಿದೆ ಎಂಬುದನ್ನು ಅವರು ಯಾಕೆ ಬಹಿರಂಗಗೊಳಿಸುತ್ತಿಲ್ಲ ? ಮುಖ್ಯಮಂತ್ರಿ ಕಾರ್ಯಾಲಯವೇ ಈ ಆಡಿಯೋ ಬಿಡುಗಡೆ ಹಿಂದಿದೆ ಎಂಬ ಅನುಮಾನವೂ ಇದೆ. ಈ ತಂತ್ರದ ಹಿಂದೆ ಬಿಜೆಪಿಗೆ ಮಸಿ ಬಳಿಯುವ ದುರುದ್ದೇಶ ಇದೆ ಎನ್ನುವುದು ಸ್ಪಷ್ಟ. ಸಿಎಂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇಲ್ಲವಾದರೆ ತಮ್ಮ ಲೋಪವನ್ನು ಒಪ್ಪಿಕೊಂಡು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು,'' ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ