ಬೆಂಗಳೂರು: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನಾದ್ಯಂತ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರಿನಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬಂದೋಬಸ್ಥ್ ಕುರಿತಾಗಿ ಮಾಹಿತಿ ನೀಡಿದರು. ಅಲ್ಲದೆ ಬೆಳಗ್ಗೆ 6 ರಿಂದ ಮಧ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ.
ಯಾವುದೇ ರೀತಿಯ ಸಂಭ್ರಮಾಚರಣೆಗೂ ಅವಕಾಶವಿಲ್ಲ ಎಂದು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಬಂದೋಬಸ್ಥ್ ಏರ್ಪಡಿಸಲಾಗಿದೆ.
ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟು ಮಾಡಿದ್ದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಸಿಆರ್ಪಿಎಫ್ ಸಿಬಂಧಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಯಾವುದೇ ಪ್ರಚೋದನಕಾರಿ ಪೋಸ್ಟ್ ಹಾಗೂ ಕಾಮೆಂಟ್ಗಳನ್ನು ಹಾಕದಂತೆ ಎಚ್ಚರಿಕೆ ನೀಡಿದ್ದಾರೆ.
ಪರೀಕ್ಷೆ ಮುಂದೂಡಿಕೆ
ತೀರ್ಪು ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಾದ ಹಲವು ವಿಶ್ವವಿದ್ಯಾನಿಲಯಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕುವೆಂಪು ಯುನಿವರ್ಸಿಟಿ ಸೇರಿದಂತೆ ವಿವಿಧ ಯುನಿವರ್ಸಿಟಿಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸುಪ್ರೀಂ ಕೋರ್ಟ್ ನಿಂದ ಶನಿವಾರ ಅಯೋಧ್ಯೆ ಕುರಿತು ತೀರ್ಪು ಪ್ರಕಟವಾಗಲಿರುವುದರಿಂದ ನವೆಂಬರ್ 09, ಶನಿವಾರದಂದು ನಡೆಯಬೇಕಿದ್ದ ತುಮಕೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ.ವೈ.ಎಸ್ ಸಿದ್ದೇಗೌಡ ಅವರು ವಿಜಯ ಕರ್ನಾಟಕಕ್ಕೆ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿರುವುದರಿಂದ ತುಮಕೂರು ವಿವಿಗೆ ಒಳಪಡುವ ಎಲ್ಲಾ ಕಾಲೇಜುಗಳಿಗೆ ಶನಿವಾರ ರಜೆ ಇರುತ್ತದೆ. ಅಂದು ನಡೆಯಬೇಕಿದ್ದ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹೈ ಅಲರ್ಟ್
ಶಿವಮೊಗ್ಗ ಜಿಲ್ಲಾದ್ಯಂತ ಹೈ ಅಲರ್ಟ್ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್'ಗಳನ್ನು ಫಾರ್ವಡ್ ಮಾಡುವಾಗ ಎಚ್ಚರ ವಹಿಸಬೇಕು. ಕೋಮು ಸೌಹಾರ್ದತೆ ಕದಡುವಂತಹ ಸಂದೇಶ ಕಳುಹಿಸಿದರೆ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಎಚ್ಚರಿಕೆ ನೀಡಿದ್ದಾರೆ
ಬಳ್ಳಾರಿಯಲ್ಲಿ ಬಿಗಿ ಭದ್ರತೆ
ನಾಳೆ ಅಯೋಧ್ಯೆ ತೀರ್ಪು ಹಿನ್ನೆಲೆ, ಬಳ್ಳಾರಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಜಿಲ್ಲಾಡಳಿತ. ಜಿಲ್ಲೆಯಲ್ಲಿ ನಾಲ್ಕು ಕೆಎಸ್ಆರ್ಪಿ ತುಕಡಿಗಳ ನಿಯೋಜನೆ. ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಹೊಸಪೇಟೆ, ಹೂವಿನ ಹಡಗಲಿಯಲ್ಲಿ ತಲಾ ಒಂದೊಂದು ಕೆಎಸ್ಆರ್ಪಿ ತುಕಡಿಗಳ ನಿಯೋಜನೆ. ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸಿದೆ ಎಂದು ಬಳ್ಳಾರಿ ಎಸ್ಪಿ ಸಿಕೆ.ಬಾಬಾ ತಿಳಿಸಿದರು.
ರಾಮನಗರದಲ್ಲೂ ಭದ್ರತೆ
ಅಯೋಧ್ಯೆ ಭೂ ವಿವಾದ ಕುರಿತು ಸುಪ್ರೀಂ ಕೋರ್ಟ್ ನಿಂದ ಶನಿವಾರ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಈಗಾಗಲೇ ಭದ್ರತೆ ಹೆಚ್ಚಿಸಿದ್ದಾರೆ. ಯಾರಾದರೂ ಅಹಿತಕರ ಕೃತ್ಯಗಳಿಗೆ ಮುಂದಾದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ರಾಯಚೂರಲ್ಲಿ ಪೊಲೀಸ್ ಅಲರ್ಟ್
ಅಯೋಧ್ಯೆ ತೀರ್ಪು ಹಿನ್ನೆಲೆ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸುಮಾರು 1000 ಜನ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ವೇದಮೂರ್ತಿ ಹೇಳಿದರು.
ವಿಜಯಪುರ ಬಿಗಿ ಭದ್ರತೆ
ಶನಿವಾರ ವಿಜಯಪುರ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ ಎಂದು ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್ಆರ್ಪಿ ತುಕುಡಿಗಳನ್ನು ನಿಯೋಜಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಯಾವುದೇ ರೀತಿಯ ಸಂಭ್ರಮಾಚರಣೆಗೂ ಅವಕಾಶವಿಲ್ಲ ಎಂದು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಬಂದೋಬಸ್ಥ್ ಏರ್ಪಡಿಸಲಾಗಿದೆ.
ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟು ಮಾಡಿದ್ದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಸಿಆರ್ಪಿಎಫ್ ಸಿಬಂಧಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಯಾವುದೇ ಪ್ರಚೋದನಕಾರಿ ಪೋಸ್ಟ್ ಹಾಗೂ ಕಾಮೆಂಟ್ಗಳನ್ನು ಹಾಕದಂತೆ ಎಚ್ಚರಿಕೆ ನೀಡಿದ್ದಾರೆ.
ಪರೀಕ್ಷೆ ಮುಂದೂಡಿಕೆ
ತೀರ್ಪು ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಾದ ಹಲವು ವಿಶ್ವವಿದ್ಯಾನಿಲಯಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕುವೆಂಪು ಯುನಿವರ್ಸಿಟಿ ಸೇರಿದಂತೆ ವಿವಿಧ ಯುನಿವರ್ಸಿಟಿಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸುಪ್ರೀಂ ಕೋರ್ಟ್ ನಿಂದ ಶನಿವಾರ ಅಯೋಧ್ಯೆ ಕುರಿತು ತೀರ್ಪು ಪ್ರಕಟವಾಗಲಿರುವುದರಿಂದ ನವೆಂಬರ್ 09, ಶನಿವಾರದಂದು ನಡೆಯಬೇಕಿದ್ದ ತುಮಕೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ.ವೈ.ಎಸ್ ಸಿದ್ದೇಗೌಡ ಅವರು ವಿಜಯ ಕರ್ನಾಟಕಕ್ಕೆ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿರುವುದರಿಂದ ತುಮಕೂರು ವಿವಿಗೆ ಒಳಪಡುವ ಎಲ್ಲಾ ಕಾಲೇಜುಗಳಿಗೆ ಶನಿವಾರ ರಜೆ ಇರುತ್ತದೆ. ಅಂದು ನಡೆಯಬೇಕಿದ್ದ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹೈ ಅಲರ್ಟ್
ಶಿವಮೊಗ್ಗ ಜಿಲ್ಲಾದ್ಯಂತ ಹೈ ಅಲರ್ಟ್ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್'ಗಳನ್ನು ಫಾರ್ವಡ್ ಮಾಡುವಾಗ ಎಚ್ಚರ ವಹಿಸಬೇಕು. ಕೋಮು ಸೌಹಾರ್ದತೆ ಕದಡುವಂತಹ ಸಂದೇಶ ಕಳುಹಿಸಿದರೆ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಎಚ್ಚರಿಕೆ ನೀಡಿದ್ದಾರೆ
ಬಳ್ಳಾರಿಯಲ್ಲಿ ಬಿಗಿ ಭದ್ರತೆ
ನಾಳೆ ಅಯೋಧ್ಯೆ ತೀರ್ಪು ಹಿನ್ನೆಲೆ, ಬಳ್ಳಾರಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಜಿಲ್ಲಾಡಳಿತ. ಜಿಲ್ಲೆಯಲ್ಲಿ ನಾಲ್ಕು ಕೆಎಸ್ಆರ್ಪಿ ತುಕಡಿಗಳ ನಿಯೋಜನೆ. ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಹೊಸಪೇಟೆ, ಹೂವಿನ ಹಡಗಲಿಯಲ್ಲಿ ತಲಾ ಒಂದೊಂದು ಕೆಎಸ್ಆರ್ಪಿ ತುಕಡಿಗಳ ನಿಯೋಜನೆ. ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸಿದೆ ಎಂದು ಬಳ್ಳಾರಿ ಎಸ್ಪಿ ಸಿಕೆ.ಬಾಬಾ ತಿಳಿಸಿದರು.
ರಾಮನಗರದಲ್ಲೂ ಭದ್ರತೆ
ಅಯೋಧ್ಯೆ ಭೂ ವಿವಾದ ಕುರಿತು ಸುಪ್ರೀಂ ಕೋರ್ಟ್ ನಿಂದ ಶನಿವಾರ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಈಗಾಗಲೇ ಭದ್ರತೆ ಹೆಚ್ಚಿಸಿದ್ದಾರೆ. ಯಾರಾದರೂ ಅಹಿತಕರ ಕೃತ್ಯಗಳಿಗೆ ಮುಂದಾದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ರಾಯಚೂರಲ್ಲಿ ಪೊಲೀಸ್ ಅಲರ್ಟ್
ಅಯೋಧ್ಯೆ ತೀರ್ಪು ಹಿನ್ನೆಲೆ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸುಮಾರು 1000 ಜನ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ವೇದಮೂರ್ತಿ ಹೇಳಿದರು.
ವಿಜಯಪುರ ಬಿಗಿ ಭದ್ರತೆ
ಶನಿವಾರ ವಿಜಯಪುರ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ ಎಂದು ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್ಆರ್ಪಿ ತುಕುಡಿಗಳನ್ನು ನಿಯೋಜಿಸಲಾಗಿದೆ ಎಂದವರು ತಿಳಿಸಿದ್ದಾರೆ.