ಆ್ಯಪ್ನಗರ

ಆಯುರ್ವೇದ ಚಿಕಿತ್ಸೆಯಿಂದ ರೋಗನಿರೋಧಕ ಶಕ್ತಿ ಹೆಚ್ಚು: ವೈದ್ಯಾಧಿಕಾರಿ ಶೋಭಾರಾಣಿ

ಕೊರೊನಾ ಬಗ್ಗೆ ಭಯ ಬೇಡ. ಆಯುರ್ವೇ ಚಿಕಿತ್ಸೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಎಣ್ಣೆ ಪದಾರ್ಥಗಳಿಂದ ದೂರವಿದ್ದು ವಿವಿಧ ಬಗೆಯ ತರಕಾರಿಗಳನ್ನು ಸೇವಿಸಿ ಎಂದು ಕೊಲ್ಲೂರು ಆರ್ಯುವೇದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶೋಭಾರಾಣಿ ಹೇಳಿದ್ದಾರೆ.

Vijaya Karnataka Web 23 Jul 2020, 10:43 pm
ಕಿನ್ನಿಗೋಳಿ: ಕೊರೊನಾ ಬಗ್ಗೆ ಭಯ ಬೇಡ. ಆಯುರ್ವೇದ ಚಿಕಿತ್ಸೆಯಿಂದ ರೋಗ ನಿರೋಧಕ ಶಕ್ತಿ ಜಾಸ್ತಿ. ಎಣ್ಣೆ ಪದಾರ್ಥಗಳಿಂದ ದೂರವಿದ್ದು ವಿವಿಧ ಬಗೆಯ ತರಕಾರಿಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ ಎಂದು ಕೊಲ್ಲೂರು ಆರ್ಯುವೇದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶೋಭಾರಾಣಿ ಹೇಳಿದರು.
Vijaya Karnataka Web Ayurveda


ಮೂಲ್ಕಿ ವಲಯ ಪತ್ರಕರ್ತರ ಸಮೂಹದ ಪತ್ರಿಕಾ ದಿನಾಚರಣೆ ಅಂಗವಾಗಿ ಕೊಲ್ಲೂರು ಆಯುರ್ವೇದ ಸರಕಾರಿ ಆಸ್ಪತ್ರೆ ಆವರಣದಲ್ಲಿನಡೆದ ಕಾರ‍್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್‌ನಿಂದ ರಕ್ಷಣೆ ಪಡೆಯಲು ಆಯುರ್ವೇದವು ಹೇಗೆ ಸಹಕಾರಿ ಎಂಬುದನ್ನು ವಿವರಿಸಿದರು.

ತುಳು ಸಾಹಿತ್ಯ ಅಕಾಡಮಿ ಸದಸ್ಯರಾಗಿ ಆಯ್ಕೆಯಾದ ಪತ್ರಕರ್ತ ನರೇಂದ್ರ ಕೆರೆಕಾಡು ಮತ್ತು ಉರಗ ತಜ್ಞ ಯತೀಶ್‌ ಶೆಟ್ಟಿ ಅವರನ್ನು ಅವರನ್ನು ಸನ್ಮಾನಿಸಲಾಯಿತು. ಮಾಧ್ಯಮ ಮಿತ್ರರಿಗೆ ರೋಗ ನಿರೋಧಕ ಶಕ್ತಿಯುಳ್ಳ ಮಾತ್ರೆ ವಿತರಿಸಲಾಯಿತು.

ಬೆಂಗಳೂರಲ್ಲಿ ವಲಯವಾರು ಸಭೆ ನಡೆಸಿದ ಸಿಎಂ: ಕೋವಿಡ್‌ ಟೆಸ್ಟ್‌ ಹೆಚ್ಚಿಸಿ, ಕ್ಷಿಪ್ರ ವರದಿಗೆ ಸೂಚನೆ!

ದ.ಕ. ಜಿಪಂ ಸದಸ್ಯ ವಿನೋದ್‌ ಬೊಳ್ಳೂರು, ಪಡುಪಣಂಬೂರು ಗ್ರಾಪಂ ಮಾಜಿ ಅಧ್ಯಕ್ಷ ಮೋಹನ್‌ದಾಸ್‌, ಮೂಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್‌ ಶೆಟ್ಟಿ ಕಿಲೆಂಜೂರು, ಕಾರ್ಯದರ್ಶಿ ಹರಿಪ್ರಸಾದ್‌ ನಂದಳಿಕೆ ಮತ್ತಿತರರು ಉಪಸ್ಥಿತರಿದ್ದರು.

ಒಮ್ಮೆ ಕೊರೊನಾ ಬಂದರೆ ಮತ್ತೆ ಬರುವ ಸಾಧ್ಯತೆ ಕಡಿಮೆ ಎಂದ ತಜ್ಞರು!

ಶರತ್‌ ಶೆಟ್ಟಿ ಸ್ವಾಗತಿಸಿದರು. ಹರಿಪ್ರಸಾದ್‌ ನಂದಳಿಕೆ ವಂದಿಸಿದರು. ಹರೀಶ್‌ ಹೆಜ್ಮಾಡಿ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ