ಆ್ಯಪ್ನಗರ

ಆಯುಷ್ಮಾನ್‌-ಆರೋಗ್ಯ ಕರ್ನಾಟಕ ಜಾರಿಗೆ ಕಾರ್ಯನಿರ್ವಾಹಕರ ನೇಮಕಕ್ಕೆ ಆದೇಶ

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಕಾರ್ಯನಿರ್ವಾಹಕರನ್ನು ...

Vijaya Karnataka 20 Jul 2019, 5:00 am
ಬೆಂಗಳೂರು: ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಕಾರ್ಯನಿರ್ವಾಹಕರನ್ನು ನೇಮಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
Vijaya Karnataka Web BNG-1907-2-2-AROGYA KARNATAKA LOGO


ಎಲ್ಲರಿಗೂ ಆರೋಗ್ಯ ಸೇವೆ ಒದಗಿಸುವ ಉದ್ದೇಶದೊಂದಿಗೆ 2018ರ ನ. 30ರಂದು ಜಾರಿಗೆ ಬಂದ ಆಯಷ್ಮಾನ್‌ಭಾರತ್‌- ಆರೋಗ್ಯ ಕರ್ನಾಟಕ ಯೋಜನೆಯಡಿ 291 ಸಾಮಾನ್ಯ, 254 ಕ್ಲಿಷ್ಟಕರ ದ್ವಿತೀಯ, 900 ತೃತೀಯ ಹಾಗೂ 169 ಇತರ ಆರೋಗ್ಯ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತಿದೆ. ಈ ಚಿಕಿತ್ಸೆಯ ಮೊತ್ತವನ್ನು ಸುವರ್ಣ ಆರೋಗ್ಯ ಟ್ರಸ್ಟ್‌ ಮೂಲಕ ಪಡೆಯಲು ರೋಗಿಯ ಮಾಹಿತಿ ಹಾಗೂ ಚಿಕಿತ್ಸಾ ವಿವರಗಳನ್ನು ಟ್ರಸ್ಟ್‌ನ ಪೋರ್ಟ್‌ಲ್‌ನಲ್ಲಿ ದಾಖಲಿಸಲು ಸಿಬ್ಬಂದಿ ಕೊರತೆ ಎದುರಾಗಿದೆ. ಹೀಗಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳುವಂತೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಹೊರಗುತ್ತಿಗೆ ಆಧಾರದ ಮೇಲೆ ಮಾನವ ಸಂಪನ್ಮೂಲ ಏಜೆನ್ಸಿಯಿಂದ ನಿರ್ದಿಷ್ಟ ವಿದ್ಯಾರ್ಹತೆ ಹೊಂದಿರುವ (ಬಿ.ಕಾಂ ಅಥವಾ ಬಿಬಿಎ, ಐ.ಟಿ. ಸಿಸ್ಟಮ್‌ ಹಾಗೂ ಮೈಕ್ರೋಸಾಫ್ಟ್‌ ಆಫೀಸ್‌ ತರಬೇತಿ, ಎಂಸಿಎ, ಎಂಬಿಎ, ಪಿಜಿಡಿಬಿಎ)ವರನ್ನು ಕಾರ್ಯನಿರ್ವಾಹಕರನ್ನು ಪಡೆಯಲು ಸೂಚಿಸಲಾಗಿದೆ. ಇದಕ್ಕಾಗಿ ಟೆಂಡರ್‌ ಕರೆದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯ ಸಮಿತಿ ರಚಿಸಿ ಆಸ್ಪತ್ರೆಗಳಿಗೆ ಅರ್ಹರನ್ನು ನೇಮಕ ಮಾಡಬೇಕು ಎಂದು ಸೂಚಿಸಲಾಗಿದೆ.

ಸಮಿತಿಯಲ್ಲಿರುವವರು

ಅಧ್ಯಕ್ಷ: ಜಿಪಂ ಸಿಇಒ

ಸದಸ್ಯ ಕಾರ್ಯದರ್ಶಿ:ಜಿಲ್ಲಾ ಆರೋಗ್ಯಾಧಿಕಾರಿ

ಜಿಲ್ಲಾ ಸಂಯೋಜಕರು: ಸುವರ್ಣ ಆರೋಗ್ಯ ಟ್ರಸ್ಟ್‌, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ವೈದ್ಯಕೀಯ ಅಧೀಕ್ಷಕರು, ಇಲಾಖೆಯ ನೋಡಲ್‌ ಅಧಿಕಾರಿಗಳು

ಕಾರ್ಯನಿರ್ವಾಹಕರ ನೇಮಕ

ತಾಲೂಕು ಆಸ್ಪತ್ರೆಗೆ ಒಬ್ಬರು

ಜಿಲ್ಲಾ ಆಸ್ಪತ್ರೆಗೆ ಇಬ್ಬರು

ಜಿಲ್ಲಾ ಆಸ್ಪತ್ರೆಗಳಿಗೆ (400 ಹಾಸಿಗೆ) ಮೂವರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ