ಆ್ಯಪ್ನಗರ

50 ಲಕ್ಷ ಸದಸ್ಯತ್ವಕ್ಕೆ ತೀರ್ಮಾನ: ಸಿಎಂ ಯಡಿಯೂರಪ್ಪ

ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆಯುತ್ತಿರುವ ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.

Vijaya Karnataka Web 3 Aug 2019, 12:30 pm
ಬೆಂಗಳೂರು: ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆಯುತ್ತಿರುವ ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಿದರು.
Vijaya Karnataka Web BSY


ಬಿಜೆಪಿ ಕಾರ್ಯಾಲಯವಾದ ಜಗನ್ನಾಥ ಭವನದ ಎದುರು ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ದೇಶ್ಯಾದ್ಯಂತ ಆಗಸ್ಟ್ 11ರವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಕಳೆದ ಬಾರಿ ರಾಜ್ಯದಲ್ಲಿ 80 ಲಕ್ಷ ಸದಸ್ಯತ್ವ ಮಾಡಿದ್ದೆವು. ಈ ಬಾರಿ 80 ಲಕ್ಷದ ಜತೆ ಇನ್ನು 50 ಲಕ್ಷ ಸದಸ್ಯತ್ವ ಮಾಡಲು ತೀರ್ಮಾನ ಮಾಡಿದ್ದೇವೆ. ಈಗಾಗಲೇ ಸುಮಾರು 12 ಲಕ್ಷ ಸದಸ್ಯತ್ವ ನೋಂದಾವಣೆಯಾಗಿದೆ. ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 50 ಸಾವಿರ ಹೊಸ ಸದಸ್ಯತ್ವ ಮಾಡಬೇಕು. ಪ್ರತಿಯೊಂದು ಬೂತ್‌ನಲ್ಲಿ 100 ಸದಸ್ಯರನ್ನು ಮಾಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪಕ್ಷದ ಶಾಸಕರು, ಸಂಸದರು ಸೇರಿದಂತೆ ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿ ಲೋಕಸಭೆ ಚುನಾವಣೆಯಲ್ಲಿ 25+1 ಕ್ಷೇತ್ರಗಳನ್ನು ಗೆದ್ದಂತ ಪಕ್ಷ ಬಿಜೆಪಿ. 6ನೇ ತಾರೀಖು ದಿಲ್ಲಿಗೆ ತೆರಳಿ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿಯಾಗುತ್ತೇನೆ. ಕರ್ನಾಟಕ ರಾಜ್ಯಕ್ಕೆ ಬರಬೇಕಿರುವ ಅನುದಾನದ ಬಗ್ಗೆ ಚರ್ಚಿಸುತ್ತೇನೆ ಎಂದು ಸಿಎಂ ಯಡಿಯಬರಪ್ಪ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ