ಆ್ಯಪ್ನಗರ

‘ಬಡವರ ಬಂಧು’ ನಿಯಮಾವಳಿ ಸಡಿಲ

ಬೀದಿಬದಿ ವ್ಯಾಪಾರಿಗಳಿಗೆ ಸಾಲ ನೀಡುವ 'ಬಡವರ ಬಂಧು' ಯೋಜನೆ ಅನುಷ್ಠಾನದಲ್ಲಿ ತೊಡಕಾಗಿದ್ದ ಕೆಲ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಸಹಕಾರ ಸಚಿವ ...

Vijaya Karnataka 26 Jan 2019, 5:00 am
ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಸಾಲ ನೀಡುವ 'ಬಡವರ ಬಂಧು' ಯೋಜನೆ ಅನುಷ್ಠಾನದಲ್ಲಿ ತೊಡಕಾಗಿದ್ದ ಕೆಲ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ತಿಳಿಸಿದ್ದಾರೆ.
Vijaya Karnataka Web badavara bandu
‘ಬಡವರ ಬಂಧು’ ನಿಯಮಾವಳಿ ಸಡಿಲ


ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ''ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸ್ಥಳೀಯ ಸಂಸ್ಥೆಗಳ ಗುರುತಿನ ಚೀಟಿ ಹಾಗೂ ರೇಷನ್‌ ಕಾರ್ಡ್‌ ದಾಖಲೆಯಾಗಿ ತೋರಿಸುವುದು ಕಡ್ಡಾಯವಾಗಿತ್ತು. ಈಗ ಆ ನಿಯಮವನ್ನು ಕೈಬಿಡಲು ಆದೇಶಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಮಾರಾಟ ಮಾಡುತ್ತಿರುವುದರ ಫೋಟೊ ಪಡೆದು ಅದರ ಆಧಾರದ ಮೇಲೆ ಸಾಲ ವಿತರಿಸುವಂತೆ ಸಹಕಾರ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಲಾಗಿದೆ'' ಎಂದು ತಿಳಿಸಿದರು.

''ಈವರೆಗೆ ಒಟ್ಟು 8,000 ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ವಿತರಿಸಲಾಗಿದ್ದು, ಫೆಬ್ರವರಿ 10 ರೊಳಗೆ ನಿಗದಿತ ಗುರಿಯಂತೆ ಒಟ್ಟು 53,000 ಮಂದಿಗೆ ಯೋಜನೆ ತಲುಪಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ 4 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ಯೋಜನೆಯನ್ನು ವಿಸ್ತರಣೆ ಮಾಡಲಾಗುವುದು'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ