ಆ್ಯಪ್ನಗರ

ಬಳ್ಳಾರಿ ಕಾರು ಅಪಘಾತ, ಸಚಿವ ಆರ್‌ ಅಶೋಕ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

‘‘ಅಪಘಾತ ಪ್ರಕರಣದ ಬಗ್ಗೆ ರಾಜ್ಯ ಸರಕಾರ ತನಿಖೆ ನಡೆಸುವ ಬದಲು ಸಚಿವರ ಪುತ್ರನ ರಕ್ಷಣೆಗೆ ನಿಂತಿದೆ. ತಕ್ಷಣವೇ ಶರತ್‌ ಅವರನ್ನು ಬಂಧಿಸಿ ತನಿಖೆ ನಡೆಸಬೇಕು, ತನಿಖೆ ಮುಗಿಯುವ ತನಕ ಅಶೋಕ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ," ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

Vijaya Karnataka 15 Feb 2020, 7:03 pm
ಬೆಂಗಳೂರು: ಹೊಸಪೇಟೆಯ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌ ಪುತ್ರನ ಪಾತ್ರವಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ತನಿಖೆ ಮುಗಿಯುವವರೆಗೂ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಆಗ್ರಹಿಸಿದೆ.
Vijaya Karnataka Web R Ashok


‘‘ಅಪಘಾತ ಪ್ರಕರಣದ ಬಗ್ಗೆ ರಾಜ್ಯ ಸರಕಾರ ತನಿಖೆ ನಡೆಸುವ ಬದಲು ಸಚಿವರ ಪುತ್ರನ ರಕ್ಷಣೆಗೆ ನಿಂತಿದೆ. ತಕ್ಷಣವೇ ಶರತ್‌ ಅವರನ್ನು ಬಂಧಿಸಿ ತನಿಖೆ ನಡೆಸಬೇಕು, ತನಿಖೆ ಮುಗಿಯುವ ತನಕ ಅಶೋಕ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ," ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.



ಈ ಮಧ್ಯೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಂಸದ ಡಿಕೆ ಸುರೇಶ್‌ ಅವರು ಸಚಿವ ಅಶೋಕ್‌ ಅವರನ್ನೇ ಟಾರ್ಗೆಟ್‌ ಮಾಡಿ ವಾಗ್ದಾಳಿ ನಡೆಸಿದರು.

"ಇವತ್ತು ಕಾಂಗ್ರೆಸ್‌ನವರು ಏನೇ ಮಾಡಿದರೂ ಅಪರಾಧವಾಗುತ್ತದೆ, ಶಾಸಕ ಹ್ಯಾರೀಸ್‌ ಪುತ್ರನ ಘಟನೆ ಬಹಳ ಚರ್ಚೆಯಾಗುತ್ತಿದೆ. ಬಿಜೆಪಿಯವರು ಮಾಡಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆ ಕಾರು ಬಿಜೆಪಿ ನಾಯಕರಿಗೆ ಸೇರಿದ್ದೆಂದು ಹೇಳುತ್ತಿದ್ದಾರೆ. ಮೃತಪಟ್ಟ ಯುವಕರ ಕುಟುಂಬಗಳಿಗೆ ಸಾಂತ್ವನ ಹೇಳುವುದಕ್ಕೂ ಬಿಜೆಪಿ ನಾಯಕರು ಹೋಗಲಿಲ್ಲ. ಅಶೋಕ್‌ ಅವರ ಮಗ ಆಕ್ಸಿಡೆಂಟ್‌ ಆಗಿಲ್ಲವೆಂದು ಹೇಳುತ್ತಿದ್ದಾರೆ, ಅಲ್ಲಿನ ಎಸ್‌ಪಿ ಕೂಡ ಏನೂ ಆಗಿಲ್ಲವೆನ್ನುತ್ತಿದ್ದಾರೆ. ಆದರೆ ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಅಶೋಕ್‌ ಮತ ಇದ್ದರು ಎಂದು ಹೇಳುತ್ತಿದ್ದಾರೆ. ಇದು ಪೊಲೀಸರ ತಾರತಮ್ಯ ನೀತಿಯನ್ನು ತೋರಿಸುತ್ತದೆ," ಎಂದು ಟೀಕಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ