ಆ್ಯಪ್ನಗರ

ಬಳ್ಳಾರಿಗೆ ಕಾಂಗ್ರೆಸ್‌ನಿಂದ ವೆಂಕಟೇಶ್‌ ಪ್ರಸಾದ್‌ ಅಭ್ಯರ್ಥಿ

ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್‌ ಪ್ರಸಾದ್‌ ಹೆಸರು ಅಂತಿಮಗೊಳಿಸಲಾಗಿದೆ...

Vijaya Karnataka 15 Oct 2018, 5:00 am
ಬೆಂಗಳೂರು : ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್‌ ಪ್ರಸಾದ್‌ ಹೆಸರು ಅಂತಿಮಗೊಳಿಸಲಾಗಿದೆ.
Vijaya Karnataka Web venkatesh


ಉಪ ಚುನಾವಣೆ ಉಮೇದುವಾರರ ಆಯ್ಕೆ ಪೂರ್ಣಗೊಳಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಸೂಚಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಮತ್ತು ಜಿಲ್ಲೆಯ ಶಾಸಕರೊಂದಿಗೂ ಮಾತುಕತೆ ನಡೆಸಿ ಒಮ್ಮತಕ್ಕೆ ಬರುವಂತೆ ಹೈಕಮಾಂಡ್‌ ನಿರ್ದೇಶಿಸಿತ್ತು.

ಅದರಂತೆ ವೆಂಕಟೇಶ್‌ ಪ್ರಸಾದ್‌ ಅವರನ್ನು ಕಣಕ್ಕಳಿಸಲು ನಿರ್ಧರಿಸಲಾಗಿದೆ. ಸಚಿವ ಡಿಕೆಶಿ ಅವರೊಂದಿಗೆ ಪ್ರಸಾದ್‌ ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ಖಚಿತ ಪಡಿಸಿವೆ.

ಈ ಮಧ್ಯೆ ವಿಧಾನ ಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಹೆಸರನ್ನೂ ಮುಂಚೂಣಿಗೆ ತರಲಾಗಿದೆ. ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಮತ ನಿರ್ಣಾಯಕ ಆಗಿರುವುದರಿಂದ ಉಗ್ರಪ್ಪ ಅವರನ್ನು ಕಣಕ್ಕಿಳಿಸಲು ಬಳ್ಳಾರಿ ಶಾಸಕರ ಒಂದು ಬಣ ಯತ್ನ ನಡೆಸುತ್ತಿದೆ. ಆದರೆ, ಉಗ್ರಪ್ಪ ಅವರನ್ನು ಸ್ಪರ್ಧೆಗೆ ಪರಿಗಣಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ