ಆ್ಯಪ್ನಗರ

ಕಸದಿಂದ ವಿದ್ಯುತ್ ! ಬೆಂಗಳೂರು ಕಸ ವಿಲೇವಾರಿಗೆ ಸರಕಾರದಿಂದ ಮಾಸ್ಟರ್ ಪ್ಲಾನ್

ಬೆಂಗಳೂರು ಕಸದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧಿಕಾರಿಗಳ ಜೊತೆಗೆ ಸೋಮವಾರ ಸಭೆ ನಡೆಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಯಿತು.

Vijaya Karnataka Web 21 Oct 2019, 1:54 pm
ಬೆಂಗಳೂರು: ಬೆಂಗಳೂರು ನಗರದ ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. ಕಸದಿಂದ ವಿದ್ಯುತ್ ಉತ್ಪಾದನೆ ಮಾಡಲು ಮುಂದೆ ಬರುವ ಖಾಸಗಿ ಕಂಪನಿಗಳಿಗೆ ಉಚಿತ ಕಸವನ್ನು ನೀಡುವ ನಿರ್ಧಾರಕ್ಕೆ ಬಂದಿದೆ. ಸೋಮವಾರ ಕಸ ವಿಲೇವಾರಿ ಸಮಸ್ಯೆ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಿಎಂ ಬಿಎಸ್‌ವೈ ಸೂಚನೆ ನೀಡಿದ್ದಾರೆ.
Vijaya Karnataka Web garbage


ಬೆಂಗಳೂರು ನಗರದ ಕಸವನ್ನು ವಿಲೇವಾರಿ ಮಾಡುವುದು ದೊಡ್ಡ ತಲೆನೋವಾಗಿದ್ದು ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸಭೆ ನಡೆಸಿದರು. ಸಭೆಯಲ್ಲಿ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಸಂಸದ ಪಿ.ಸಿ‌ ಮೋಹನ್ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಗೌತಮ್ ಭಾಗಿಯಾಗಿದ್ದರು.

'ಟಿಪ್ಪು ಜಯಂತಿ ಹತ್ತಿರ ಬರ್ತಿದೆ, ಹಾಗಾಗಿ ಸಿದ್ದುಗೆ ಸಾವರ್ಕರ್ ನೆನಪಾಯ್ತು'! ಸಿಟಿ ರವಿ ಟಾಂಗ್

ಬಿಬಿಎಂಪಿಯಿಂದ ಕಸ ವಿಲೇವಾರಿ‌ ವೈಜ್ಞಾನಿಕವಾಗಿ ಆಗದಿರುವ ಕುರಿತಾಗಿ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಈ ವೇಳೆ ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ ಕಣ್ಣೂರಿನ ಕಸದಿಂದ ಊರಿನ‌ ಬೋರ್ ವೆಲ್ ಮತ್ತು‌ ನೀರು ಕಲುಷಿತ ಆಗುತ್ತಿರುವ ಕುರಿತಾಗಿ ಕಣ್ಣೂರು ಗ್ರಾಮಸ್ಥರು ಸಿಎಂ ಬಿಎಸ್‌ವೈಗೆ ಮನವಿ ಸಲ್ಲಿಸಿದರು.

ನಿವಾಸಿಗಳ ಮನವಿ ಸ್ವೀಕರಿಸಿದ ಸಿಎಂ ಈ ವೇಳೆ ಕಣ್ಣೂರು ಗ್ರಾಮದ ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡುವಂತೆ ಬಿಬಿಎಂಪಿ ಕಮಿಷನರ್‌ಗೆ ಸೂಚನೆ ನೀಡಿದರು. ಅಲ್ಲದೆ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವಂತೆ ಕಮಿಷನರ್ ಗೆ ಸೂಚನೆ ನೀಡಿದ ಅವರು ಇದಕ್ಕೋಸ್ಕರ 500 ಕೋಟಿ‌ ರೂಪಾಯಿ ಮೊತ್ತವನ್ನು ಮೀಸಲಿಡುವ ನಿರ್ಧಾರಕ್ಕೆ ಬರಲಾಗಿದೆ.

ಸಿ.ಪಿ.ಯೋಗೇಶ್ವರ್ ಬಿಜೆಪಿಗೆ 'ಕೈ'ಕೊಡಲ್ಲ, ಕಾಂಗ್ರೆಸ್ ಸೇರೋ ಚಾನ್ಸೇ ಇಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್

ಸಭೆಯಲ್ಲಿ ಕಸದಿಂದ ವಿದ್ಯುತ್ ಉತ್ಪಾದನೆ ಕುರಿತಾಗಿಯೂ ಚರ್ಚೆ ನಡೆದಿದ್ದು, ಈ ಬಗ್ಗೆ ಗಮನ ಹರಿಸುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಡೂರು ಪ್ರದೇಶದ ಕಸವನ್ನು ಅಲ್ಲಿಯೇ ಕರಗಿಸಿ ವಿದ್ಯುತ್ ಉತ್ಪಾದನೆಗೆ ಬಳಸುವಂತೆ ಸೂಚನೆ ನೀಡಿದರು.

ಅಲ್ಲದೆ ಕಸದಿಂದ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿ ಕಂಪನಿಗಳು ಮುಂದಾದರೆ ಅವರಿಗೆ ಉಚಿತವಾಗಿ ಕಸವನ್ನು ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ನಗರದ ಕಸದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆಗೆ ಇನ್ನು ಮುಂದೆ ವಾರಕ್ಕೆ ಒಮ್ಮೆ ಸಭೆ ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ