ಆ್ಯಪ್ನಗರ

ರಾಜ್ಯದೆಲ್ಲೆಡೆ ಬೆಂಗಳೂರು ಒನ್‌ ಮಾದರಿ ಕೇಂದ್ರ: ಡಿವಿ ಸದಾನಂದಗೌಡ

ಬೆಂಗಳೂರು ಒನ್‌ ಕೇಂದ್ರ ಮಾದರಿಯಲ್ಲಿ ರಾಜ್ಯದಲ್ಲಿ ಎಲ್ಲೆಡೆಯೂ ಇಂಥ ಕೇಂದ್ರ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ ಡಿವಿ ಸದಾನಂದಗೌಡ

Vijaya Karnataka Web 30 Jun 2019, 4:38 pm
ಬೆಂಗಳೂರು: ನಾಗರಿಕರಿಗೆ ಒಂದೇ ಸೂರಿನಡಿ ಹಲವು ಸೌಲಭ್ಯ ಒದಗಿಸುವ ಬೆಂಗಳೂರು-ಒನ್ ಮಾದರಿ ಕೇಂದ್ರಗಳನ್ನು ರಾಜ್ಯದ ಉದ್ದಗಲಕ್ಕೂ ವಿಸ್ತರಣೆ ಮಾಡುವ ಅಗತ್ಯ ಇದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
Vijaya Karnataka Web ಡಿವಿ ಸದಾನಂದಗೌಡ
ಡಿವಿ ಸದಾನಂದಗೌಡ


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗಿದ್ದ, ಅವಧಿಯಲ್ಲಿ ಜಾರಿಗೆ ತಂದ ಸಕಾಲ ಯೋಜನೆಯಲ್ಲಿ ಇದು ಕೂಡ ಅಡಕವಾಗಿತ್ತು ಎಂದು ಹೇಳಿದರು.

ಬೆಂಗಳೂರು-ಒನ್ ಕೇಂದ್ರಗಳು ಜನರಿಗೆ ಒಂದೇ ಸೂರಿನಡಿ ಹಲವು ಸೌಲಭ್ಯಗಳನ್ನು ನೀಡುತ್ತಾ ಉತ್ತಮ ಸೇವೆ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು.

ಇದನ್ನು ರಾಜ್ಯದ ಇತರೆ ಕೇಂದ್ರಗಳಿಗೆ ವಿಸ್ತರಣೆ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೇಂದ್ರ ಸಚಿವ ಸದಾನಂದಗೌಡ ಅಭಿಪ್ರಾಯಪಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ