ಆ್ಯಪ್ನಗರ

ಪಿಂಚಣಿ ಹಣ ​ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ನಿರ್ಬಂಧ: ಶಾಕ್ ಕೊಟ್ಟ ಆರ್.ಅಶೋಕ

ಪಿಂಚಣಿ ಹಣ ​ಡ್ರಾ ಮಾಡದಿದ್ದರೆ ಅಂತಹ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಮೂಲಕ ರಾಜ್ಯದ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದಾರೆ.

Vijaya Karnataka Web 16 Feb 2021, 5:28 pm
ಬೆಂಗಳೂರು: ಸತತ 9 ತಿಂಗಳು ಬ್ಯಾಂಕ್ನಿಂದ ಪಿಂಚಣಿ ಹಣ ಡ್ರಾ ಮಾಡದಿದ್ದರೆ ಅಂತಹ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
Vijaya Karnataka Web r ashok


ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷ 4 ಲಕ್ಷ ಪಿಂಚಣಿದಾರರು ಹೊಸದಾಗಿ ಸೇರ್ಪಡೆಯಾಗುತ್ತಿದ್ದಾರೆ. ಸೂಕ್ತ ಫಲಾನುಭವಿಗಳಿಗೆ ಪಿಂಚಣಿ ಹಣ ಸಿಗಲಿ ಎಂಬ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಮುಂದುವರೆದು ಮಾತನಾಡಿದಂತ ಅವರು, ಸತತ 9 ತಿಂಗಳು ಬ್ಯಾಂಕ್ ನಿಂದ ಪಿಂಚಣಿ ಹಣ ವಿತ್ ಡ್ರಾ ಮಾಡದಿದ್ದರೇ ಅಂಥ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲು ಬ್ಯಾಂಕ್ ಗಳಿಗೆ ಸೂಚಿಸಲಾಗುತ್ತದೆ ಎಂದಿದ್ದಾರೆ.

ಕೊರೊನಾ ಸೋಂಕಿನ ಭೀತಿಯಿಂದ ಹಿರಿಯ ನಾಗರೀಕರು ಒಂದು ವರ್ಷದಿಂದ ಬ್ಯಾಂಕ್ ಸೇರಿದಂತೆ ಜನ ಜಂಗುಳಿ ಪ್ರದೇಶಗಳಿಗೆ ಹೋಗಿಲ್ಲ. ಈಗ ಸಚಿವರ ಹೇಳಿಕೆಯಿಂದ ಹಿರಿಯ ನಾಗರೀಕರು ಸಂಕಷ್ಟಕ್ಕೀಡಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ