ಆ್ಯಪ್ನಗರ

ನೋಟಿಸ್‌ ನೀಡದೆ ಉಚ್ಚಾಟಿಸಲು ಒತ್ತಾಯ, ಕೆ.ಎಸ್‌ ಈಶ್ವರಪ್ಪ ವಿರುದ್ಧ ಯತ್ನಾಳ್‌ ಬೆಂಬಲಿಗರ ಕಿಡಿ

ಬಿಜೆಪಿ ಶಾಸಕ ಯತ್ನಾಳ್‌ಗೆ ನೋಟಿಸ್‌ ನೀಡದೆ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಒತ್ತಾಯಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಇದೀಗ ಯತ್ನಾಳ್ ಬೆಂಬಲಿಗರು ತಿರುಗಿಬಿದ್ದಿದ್ದಾರೆ.

Vijaya Karnataka Web 22 Oct 2020, 10:31 am
ಬೆಂಗಳೂರು: ಸಿಎಂ ಬಿ.ಎಸ್‌ ಯಡಿಯೂರಪ್ಪ ಇನ್ನು ಹೆಚ್ಚು ಅವಧಿಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡದೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಯತ್ನಾಳ್ ಬೆಂಬಲಿಗರು ತಿರುಗಿಬಿದ್ದಿದ್ದಾರೆ.
Vijaya Karnataka Web basana gowda patil yatnal


ಸೋಮವಾರ ಶಾಸಕ ಯತ್ನಾಳ್ ವಿಜಯಪುರದಲ್ಲಿ ಮಾತನಾಡಿ, ಬಿಎಸ್‌ ಯಡಿಯೂರಪ್ಪ ಸಿಎಂ ಸ್ಥಾನ ಬದಲಾಗಿ ಉತ್ತರ ಕರ್ನಾಟಕದ ವ್ಯಕ್ತಿಗೆ ಈ ಪಟ್ಟ ಸಿಗುತ್ತದೆ ಎಂದು ಭವಿಷ್ಯ ನುಡಿದಿದ್ದರು. ಹೈಕಮಾಂಡ್‌ ಕೂಡಾ ಬಿಎಸ್‌ವೈ ಬಗ್ಗೆ ಮುನಿಸಿಕೊಂಡಿದೆ ಎಂದಿದ್ದರು. ಯತ್ನಾಳ್ ಈ ಹೇಳಿಕೆ ರಾಜಕೀಯ ವಯಲಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.

ಯತ್ನಾಳ್ ವಿರುದ್ಧ ನೋಟಿಸ್‌ ನೀಡದೆ ಕ್ರಮ ಕೈಗೊಳ್ಳಿ! ಕೆ.ಎಸ್ ಈಶ್ವರಪ್ಪ ಆಗ್ರಹ

ಈ ನಡುವೆ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿ, ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ನೋಟಿಸ್‌ ನೀಡದೆ ಕೂಡಲೇ ಕ್ರಮ ಜರಗಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಆಗ್ರಹಿಸಿದ್ದರು. ಅಷ್ಟೇ ಅಲ್ಲದೆ ಯತ್ನಾಳ್ ಅವರನ್ನು ಕೂಡಲೇ ಬಿಜೆಪಿಯಿಂದ ಹೊರಹಾಕಬೇಕು, ಅವರು ನೀಡಿರುವ ಹೇಳಿಕೆ ಮೂರ್ಖತನದ ಹೇಳಿಕೆಯಾಗಿದೆ ಎಂದು ಕಿಡಿಕಾರಿದ್ದರು.


ಇದೀಗ ಈಶ್ವರಪ್ಪ ವಿರುದ್ಧ ಯತ್ನಾಳ್ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಮುಗಿಬಿದ್ದಿದ್ದಾರೆ. “ಈಶ್ವರಪ್ಪನವೇ ಹರಕು ಬಾರಿ ಯಾರದ್ದು ಅಂತ ನಮಗೆ ಚೆನ್ನಾಗಿ ಗೊತ್ತಿದೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ನೀವು ಹೇಳುವುದಾದರೆ ನಿಮ್ಮನ್ನು ಮೊದಲು ಉಚ್ಚಾಟನೆ ಮಾಡಬೇಕು. ಯಾಕೆಂದ್ರೆ ತಮ್ಮ ರಾಯಣ್ಣ ಬ್ರಿಗೇಡ್ ಮರೆತು ಹೋಯಿತಾ” ಎಂದು ಯತ್ನಾಳ್ ಬೆಂಬಲಿಗರೊಬ್ಬರು ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ಸ್ಟೇಟಸ್‌ನ್ನು ಯತ್ನಾಳ್ ಕೂಡಾ ಶೇರ್ ಮಾಡಿದ್ದಾರೆ.

ಯತ್ನಾಳ್ ಹೇಳಿಕೆ ಅಶಿಸ್ತು, ಮೂರು ವರ್ಷ ಬಿಎಸ್‌ವೈ ಸಿಎಂ ಎಂದ ಬಿ.ಸಿ.ಪಾಟೀಲ್

ಇದಕ್ಕೆ ಹಲವು ಮಂದಿ ಕಾಮೆಂಟ್ ಮಾಡಿದ್ದು “ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲು ರಾಯಣ್ಣ ಬ್ರಿಗೇಡ್ ಮಾಡಿ ಕೈಸುಟ್ಟುಕೊಂಡ ಈಶ್ವರಪ್ಪ ರನ್ನು ಮೊದಲು ಉಚ್ಚಾಟಿಸಿ ಹಾಗೂ ಕರ್ನಾಟಕದಲ್ಲಿ ನಡೆದ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐ ಮಾಡಲಿ ಆವಾಗ ಯಾರನ್ನೂ ಉಚ್ಚಾಟಿಸಬೇಕೆಂದು ಸ್ಪಷ್ಟ ಚಿತ್ರಣ ಸಿಗುತ್ತದೆ” ಎಂದು ರಾಘವ್ ಅಣ್ಣಿಗೇರಿ ಎಂಬುವವರು ಕಾಮೆಂಟ್ ಮಾಡಿದ್ದಾರೆ. ಹೀಗೆ ಹಲವರು ಕಾಮೆಂಟ್ ಹಾಗೂ ಸ್ಟೇಟಸ್ ಹಾಕುವ ಮೂಲಕ ಯತ್ನಾಳ್ ಬೆಂಬಲಕ್ಕೆ ನಿಂತಿದ್ದಾರೆ.

ಯತ್ನಾಳ್‌ ಹೇಳಿಕೆ ರಾಜಕೀಯವಾಗಿ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಬಿಜೆಪಿ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿ ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಇಂತಹ ಹೇಳಿಕೆ ಕೊಟ್ಟವರ ವಿರುದ್ಧ ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ