ಆ್ಯಪ್ನಗರ

ಬಸವಕಲ್ಯಾಣ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ವಿಜಯ್ ಸಿಂಗ್‌ಗೆ ಟಿಕೆಟ್‌ ?

ಬಸವಕಲ್ಯಾಣ ಬೈ ಎಲೆಕ್ಷನ್ ಅಭ್ಯರ್ಥಿ ಆಯ್ಕೆ ಕುರಿತಾಗಿ ಬುಧವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯ್ ಸಿಂಗ್ ಟಿಕೆಟ್ ನೀಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

Vijaya Karnataka Web 21 Jan 2021, 11:26 am
ಬೆಂಗಳೂರು: ಬಸವಕಲ್ಯಾಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡರು ಸಭೆ ನಡೆಸಿದ್ದು ಮಾಜಿ ಸಿಎಂ ಧರಮ್‌ಸಿಂಗ್ ಪುತ್ರ ವಿಜಯ್ ಸಿಂಗ್ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
Vijaya Karnataka Web kpcc meeting


ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಸಲೀಂ ಅಹಮ್ಮದ್ ಸೇರಿದಂತೆ ಪ್ರಮುಖರು ಸಭೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಜೊತೆಗೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆಧೃವನಾರಾಯಣ್ ಹಾಗೂ ಬೀದರ್ ಜಿಲ್ಲೆಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಮಸ್ಕಿ, ಬಸವಕಲ್ಯಾಣ ಬೈಎಲೆಕ್ಷನ್: ಬಿಜೆಪಿಗೆ ಪ್ರತಿಷ್ಠೆ, ಕಾಂಗ್ರೆಸ್‌ಗೆ ಅನಿವಾರ್ಯತೆ!

ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಹಲವು ಆಕಾಂಕ್ಷಿಗಳು ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ ಬಸವಕಲ್ಯಾಣ ಕಾಂಗ್ರೆಸ್ ಶಾಸಕರಾಗಿದ್ದ ನಾರಾಯಣರಾವ್ ಅವರ ಪತ್ನಿ ಹೆಸರು ಹಾಗೂ ಪುತ್ರ ಗೌತಮ್ ಹೆಸರು ಕೇಳಿ ಬಂದಿದೆ. ನಾರಾಯಣರಾವ್ ಕುಟುಂಬದ ಸದಸ್ಯರನ್ನು ಕಣಕ್ಕೆ ಇಳಿಸಿದರೆ ಚುನಾವಣೆಯಲ್ಲಿ ಸಹಾನುಭೂತಿ ಪರವಾಗಿ ಮತ ಚಲಾವಣೆ ಆಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು.

ಆದರೆ ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್‌ ಪರವಾಗಿ ಸಹಾನುಭೂಮಿ ಮತಗಳು ಚಲಾವಣೆ ಆಗದ ಹಿನ್ನೆಲೆಯಲ್ಲಿ ಹಾಗೂ ನಾರಾಯಣ ರಾವ್ ಕುಟುಂಬಸ್ಥರು ರಾಜಕೀಯವಾಗಿ ಸಕ್ರಿಯರಾಗಿರದ ಕಾರಣದಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ಬೇಡ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ದಿವಂಗತ ಧರಮ್ ಸಿಂಗ್ ಅವರ ಪುತ್ರ ವಿಧಾನಪರಿಷತ್‌ ಸದಸ್ಯರಾಗಿರುವ ವಿಜಯ್ ಸಿಂಗ್ ಹೆಸರು ಬಹುತೇಕ ಅಂತಿಮವಾಗಿದೆ. ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲೂ ಉತ್ತಮವಾಗಿ ತೊಡಗಿಕೊಂಡಿರುವ ಕಾರಣಕ್ಕಾಗಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ.

ಈ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಸಭೆಯ ಬಳಿಕ ಹೆಸರನ್ನು ಅಂತಿಮಗೊಳಿಸಿ ಎಐಸಿಸಿಗೆ ಕಳಿಸಿಕೊಡಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಬಸವ ಕಲ್ಯಾಣ ಶಾಸಕರಾಗಿದ್ದ ನಾರಾಯಣ ರಾವ್ ನಿಧನದಿಂದ ತೆರವಾಗಿರುವ ಸ್ಥಾನಕ್ಕೆಉಪಚುನಾವಣೆ ನಡೆಯಲಿದೆ. ಆದರೆ ಬೈಎಲೆಕ್ಷನ್ ಅಧಿಕೃತವಾಗಿ ಇನ್ನೂ ಘೋಷಣೆ ಆಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ