ರಮೇಶ್ ಜಾರಕಿಹೊಳಿ ಪ್ರಕರಣ: ಕಾಂಗ್ರೆಸ್ನಿಂದ ನೈತಿಕತೆ ಪಾಠದ ಅಗತ್ಯ ಇಲ್ಲ, ಬಸವರಾಜ ಬೊಮ್ಮಾಯಿ
ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಿಂದ ನೈತಿಕತೆ ಪಾಠದ ಅಗತ್ಯ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಏನು ಹೇಳಿದರು ಎಂಬ ವಿವರ ಇಲ್ಲಿದೆ.
Vijaya Karnataka Web 28 May 2021, 12:49 pm
ಹೈಲೈಟ್ಸ್:
- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ
- ಕಾಂಗ್ರೆಸ್ನಿಂದ ನೈತಿಕತೆ ಪಾಠದ ಅಗತ್ಯ ಇಲ್ಲ
- ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಿಂದ ನೈತಿಕತೆಯ ಪಾಠವನ್ನು ಕಲಿಯಬೇಕಾದ ಅಗತ್ಯ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಂಡರು. ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ಭೇಟಿ ಆಗಿದ್ದು ಇದೇ ಮೊದಲು ಎಂದು ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಆರೋಪ ಮಾಡಿದ್ದರು. ಆರೋಪಿ ರಮೇಶ್ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಆಗುವ ಮೂಲಕ ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಅರ್ಥದಲ್ಲಿ ಆರೋಪ ಮಾಡಿದ್ದರು.
ನನ್ನ ಬಳಿ 11 ದಾಖಲೆಗಳಿವೆ! ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಕೆಂಡಾಮಂಡಲ
ಆದರೆ ಈ ಆರೋಪವನ್ನು ಬೊಮ್ಮಾಯಿ ನಿರಾಕರಣೆ ಮಾಡಿದ್ದಾರೆ. ಇಷ್ಟು ದಿನ ಬಿಟ್ಟು ಈ ಮಾತನ್ನು ಎತ್ತಲು ಕಾರಣ ಇದೆ. ಹೈಕೋರ್ಟ್ನಲ್ಲಿ ಈ ಕುರಿತಾಗಿ ರಿಟ್ ಅರ್ಜಿಯೊಂದು ದಾಖಲಾಗಿದೆ. ಪ್ರಕರಣದ ತನಿಖಾ ಮಾಹಿತಿಯನ್ನು ನಾವು ನ್ಯಾಯಾಲಯಕ್ಕೆ ನೀಡುತ್ತೇವೆ. ಆದರೆ ಇಂತಹ ಸಂದರ್ಭದಲ್ಲಿ ತನಿಖೆಯ ಮೇಲೆ ಪ್ರಭಾವ ಬೀರಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಮುಖಂಡ ಮೇಟಿ ಪ್ರಕರಣದಲ್ಲಿ ಮಹಿಳೆ ಬಂದು ದೂರು ಕೊಟ್ಟರು ಎಫ್ಐಆರ್ನಲ್ಲಿ ಮೇಟಿ ಅವರ ಹೆಸರಿಲ್ಲ. ಇವರಿಂದ ನೈತಿಕ ಪಾಠದ ಅಗತ್ಯವಿಲ್ಲ. ನಾವು ಏನು ಮಾಡುತ್ತೇವೆ ಎಂಬುವುದನ್ನು ಹೈಕೋರ್ಟ್ಗೆ ತಿಳಿಸುತ್ತಿದ್ದೇವೆ. ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾಂಗ್ ರೇಪ್ ಆರೋಪಿಗಳ ಬಂಧನ
ಇನ್ನು ಬೆಂಗಳೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಮಾಹಿತಿ ಸಿಕ್ಕ ಕೆಲವೇ ಅವಧಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಲಾಗಿದೆ. ಇಬ್ಬರು ಮಹಿಳೆಯರನ್ನು ಒಳಗೊಂಡು ಆರು ಜನರನ್ನು ಬಂಧಿಸಲಾಗಿದೆ.ಅವರು ಕೊಟ್ಟಿರುವ ಮಾಹಿತಿಯನ್ನು ಆಧಾರವಾಗಿ ಇನ್ನೂ ಕೆಲವರು ಕೇರಳದಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ ಎಂದರು. ಇನ್ನು ಪ್ರಕರಣದಲ್ಲಿ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧನ ಮಾಡಿರುವುದು ಒಳ್ಳೆಯ ಕೆಲಸ ಇದಕ್ಕಾಗಿ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನನ್ನ ಬಳಿ 11 ದಾಖಲೆಗಳಿವೆ! ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಕೆಂಡಾಮಂಡಲ
ಆದರೆ ಈ ಆರೋಪವನ್ನು ಬೊಮ್ಮಾಯಿ ನಿರಾಕರಣೆ ಮಾಡಿದ್ದಾರೆ. ಇಷ್ಟು ದಿನ ಬಿಟ್ಟು ಈ ಮಾತನ್ನು ಎತ್ತಲು ಕಾರಣ ಇದೆ. ಹೈಕೋರ್ಟ್ನಲ್ಲಿ ಈ ಕುರಿತಾಗಿ ರಿಟ್ ಅರ್ಜಿಯೊಂದು ದಾಖಲಾಗಿದೆ. ಪ್ರಕರಣದ ತನಿಖಾ ಮಾಹಿತಿಯನ್ನು ನಾವು ನ್ಯಾಯಾಲಯಕ್ಕೆ ನೀಡುತ್ತೇವೆ. ಆದರೆ ಇಂತಹ ಸಂದರ್ಭದಲ್ಲಿ ತನಿಖೆಯ ಮೇಲೆ ಪ್ರಭಾವ ಬೀರಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಮುಖಂಡ ಮೇಟಿ ಪ್ರಕರಣದಲ್ಲಿ ಮಹಿಳೆ ಬಂದು ದೂರು ಕೊಟ್ಟರು ಎಫ್ಐಆರ್ನಲ್ಲಿ ಮೇಟಿ ಅವರ ಹೆಸರಿಲ್ಲ. ಇವರಿಂದ ನೈತಿಕ ಪಾಠದ ಅಗತ್ಯವಿಲ್ಲ. ನಾವು ಏನು ಮಾಡುತ್ತೇವೆ ಎಂಬುವುದನ್ನು ಹೈಕೋರ್ಟ್ಗೆ ತಿಳಿಸುತ್ತಿದ್ದೇವೆ. ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾಂಗ್ ರೇಪ್ ಆರೋಪಿಗಳ ಬಂಧನ
ಇನ್ನು ಬೆಂಗಳೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಮಾಹಿತಿ ಸಿಕ್ಕ ಕೆಲವೇ ಅವಧಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಲಾಗಿದೆ. ಇಬ್ಬರು ಮಹಿಳೆಯರನ್ನು ಒಳಗೊಂಡು ಆರು ಜನರನ್ನು ಬಂಧಿಸಲಾಗಿದೆ.ಅವರು ಕೊಟ್ಟಿರುವ ಮಾಹಿತಿಯನ್ನು ಆಧಾರವಾಗಿ ಇನ್ನೂ ಕೆಲವರು ಕೇರಳದಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ ಎಂದರು. ಇನ್ನು ಪ್ರಕರಣದಲ್ಲಿ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧನ ಮಾಡಿರುವುದು ಒಳ್ಳೆಯ ಕೆಲಸ ಇದಕ್ಕಾಗಿ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.