ಆ್ಯಪ್ನಗರ

ನೇಕಾರರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಕೇಂದ್ರದಿಂದ ಆದೇಶ: ಸೀತಾರಾಮನ್ ಭರವಸೆ

ಬಾಗಲಕೋಟೆ ಹಾಗೂ ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್‌ ವೈಮಾನಿಕ ಸಮೀಕ್ಷೆ ನಡೆಸಿದರು. ಕೆಲ ಕಾಳಜಿ ಕೇಂದ್ರಗಳಿಗೂ ಅವರು ಭೇಟಿ ನೀಡಿದ್ದಾರೆ.

Vijaya Karnataka Web 10 Aug 2019, 7:32 pm
ಬೆಳಗಾವಿ: ನೇಕಾರರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಅವಕಾಶ ನೀಡುವಂತೆ ಕ್ರಮವಹಿಸಲಾಗುವುದು. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಆದೇಶ ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.
Vijaya Karnataka Web WhatsApp Image 2019-08-10 at 6.17.18 PM.


ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಶನಿವಾರ ಭೇಟಿ ಹಾಗೂ ವೈಮಾನಿಕ ಸಮೀಕ್ಷೆ ಬಳಿಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Live Blog: ಕೊಡಗಿನಲ್ಲಿ ಭಾರಿ ಮಳೆ ಮುನ್ಸೂಚನೆ

ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದಾಗ ಪ್ರವಾಹದಿಂದ ನೇಕಾರ ಕುಟುಂಬಗಳು ಸಂಕಷ್ಟಕ್ಕೀಡಾಗಿರುವುದು ಕಂಡುಬಂದಿದೆ. ಆದ್ದರಿಂದ ಬೆಳಗಾವಿ ನೇಕಾರರ ಮಗ್ಗಗಳು ಮತ್ತು ಕಚ್ಚಾ ವಸ್ತುಗಳು ಪ್ರವಾಹದಿಂದ ಹಾನಯಾಗಿರುವುದರಿಂದ ನೇಕಾರರ ಸಾಲ ಮರುಪಾವತಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಪಾವತಿಸುವಂತೆ ಪ್ರವಾಹ ಪೀಡಿತರಿಗೆ ಕಿರುಕುಳ ನೀಡಬಾರದು. ಸಾಲ ಮರುಪಾವತಿಗೆ ಅವಕಾಶ ನೀಡಬೇಕು. ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಅಗತ್ಯ ಆದೇಶ ಹೊರಡಿಸಲಿದೆ ಎಂದರು.

ಬದುಕಿಸಿದ ನಿಮಗೆ ಶರಣ್ರೀ: ಮಹಿಳೆ ಯೋಧನ ಕಾಲು ಮುಟ್ಟಿ ನಮಸ್ಕರಿಸಿದಳು!

ಬಾಗಲಕೋಟೆ ಸೇರಿದಂತೆ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮುಳುಗಿರುವ ಬೆಳೆಗೆ ತಕ್ಷಣವೇ ತಾತ್ಕಾಲಿಕ ಪರಿಹಾರವನ್ನು ನೀಡುವಂತೆ ವಿಮಾ ಕಂಪೆನಿಗಳಿಗೆ ಸೂಚನೆ ನೀಡಲಾಗುವುದು. ಬೆಳೆವಿಮೆ ಕಂಪನಿಗಳು ಪ್ರವಾಹ ಬಾಧಿತ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಮುಳುಗಡೆಯಾಗಿರುವ ಬೆಳೆಯ ಸಮೀಕ್ಷೆಗೆ ಮುಂದಾಗದೇ ತಕ್ಷಣವೇ ತಾತ್ಕಾಲಿಕವಾಗಿ ಪರಿಹಾರ ನೀಡಬೇಕು. ಸಮೀಕ್ಷೆ ಹಾಗೂ ಹೆಚ್ಚಿನ ಪರಿಹಾರದ ಬಗ್ಗೆ ನಂತರ ನಿರ್ಧರಿಸಬೇಕು ಎಂದು ಸೂಚನೆ ನೀಡಲಾಗುವುದು ಎಂದರು.

ಬೆಳೆವಿಮೆ ಅವಧಿ ವಿಸ್ತರಣೆ
ಬೆಳೆವಿಮೆ ಕಂತು ಪಾವತಿಸುವ ಅವಧಿಯನ್ನು ವಿಸ್ತರಿಸುವ ಅಗತ್ಯತೆ ತಮಗೆ ಮನವರಿಕೆಯಾಗಿದೆ. ಆದ್ದರಿಂದ ಬೆಳೆವಿಮೆ ಕಂತು ಪಾವತಿಸುವ ಅವಧಿ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗುವುದು. ವಿಮೆ ಕಂತು ತುಂಬಲು‌ ಆಗಸ್ಟ್ 16 ರ ನಂತರವೂ ಅವಧಿ ವಿಸ್ತರಿಸುವಂತೆ ಸಂಬಂಧಿಸಿದ ಕಂಪನಿಗಳಿಗೆ ಸೂವನೆ ನೀಡಲಾಗುವುದು ಎಂದು ಅವರು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ