ಆ್ಯಪ್ನಗರ

ಭೂ ಕುಸಿತ: ಬೆಂಗಳೂರು-ಮಂಗಳೂರು ರೈಲು ಮತ್ತೆ ರದ್ದು

ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯೆ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದುಗೊಂಡಿದೆ.

Vijaya Karnataka Web 14 Jun 2018, 5:15 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯೆ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದುಗೊಂಡಿದೆ.
Vijaya Karnataka Web train.


ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಬುಧವಾರ ಮತ್ತು ಗುರುವಾರ ಎಡೆಬಿಡದೆ ಮಳೆಯಾಗಿದ್ದು ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯಭಾಗದಲ್ಲಿ (ಹಾಸನದಿಂದ 86 ಕಿ.ಮೀ. ಅಂತರ) ಹಠಾತ್ ಭೂಕುಸಿತ ಉಂಟಾಗಿ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದೆ.

ಇದರಿಂದ 10.50ಕ್ಕೆ ಮಂಗಳೂರಿನಿಂದ ಹೊರಟಿದ್ದ ಕಾರವಾರ-ಬೆಂಗಳೂರು ರೈಲ್ವೆ ಸುಬ್ರಹ್ಮಣ್ಯವರೆಗೆ ಸಂಚರಿಸಿ ಬಳಿಕ ತುರ್ತು ಸೂಚನೆ ಹಿನ್ನೆಲೆಯಲ್ಲಿ ಮುಂದಿನ ಪ್ರಯಾಣ ರದ್ದುಗೊಳಿಸಿ ಮಂಗಳೂರಿಗೆ ಹಿಂದಿರುಗಿದೆ. ಅದೇ ರೀತಿ ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿನತ್ತ ಹೊರಟಿದ್ದ ರೈಲು ಸಕಲೇಶಪುರ ತನಕ ಬಂದು ಪ್ರಯಾಣ ಮೊಟಕುಗೊಳಿಸಿ ಮರಳಿ ಬೆಂಗಳೂರಿಗೆ ತೆರಳುವ ಸಾಧ್ಯತೆಯಿದೆ.

ತೆರವು ಕಾರ್ಯಾಚರಣೆ ಭೂಕುಸಿತದಿಂದ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದ್ದು ಜೆಸಿಬಿ ಮುಖೇನ ತೆರವು ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಮುಂದಿನ ಕ್ರಮದ ಪರಿಶೀಲನೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ