ಆ್ಯಪ್ನಗರ

ಬೆಂಗಳೂರು ಮಳೆ: ಒಬ್ಬರ ಮೃತ ದೇಹ ಪತ್ತೆ, ಇನ್ನಿಬ್ಬರಿಗೆ ಶೋಧ

ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದವರ ಪೈಕಿ ಒಬ್ಬರ ಮೃತ ದೇಹ ಪತ್ತೆಯಾಗಿದೆ.

Vijaya Karnataka Web 14 Oct 2017, 11:39 am
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಕುಂಭದ್ರೋಣ ಮಳೆಯಲ್ಲಿ ಕೊಚ್ಚಿ ಹೋಗಿದ್ದವರ ಪತ್ತೆ ಕಾರ್ಯಾಚರಣೆ ಮುಂದುವರಿದಿದ್ದು, ಒಬ್ಬರ ದೇಹ ಪತ್ತೆಯಾಗಿದೆ.
Vijaya Karnataka Web bengaluru rain one dead body found
ಬೆಂಗಳೂರು ಮಳೆ: ಒಬ್ಬರ ಮೃತ ದೇಹ ಪತ್ತೆ, ಇನ್ನಿಬ್ಬರಿಗೆ ಶೋಧ


ಕುರುಬರ ಹಳ್ಳಿ ಸಮೀಪದ ರಾಜಕಾಲುವೆಯಲ್ಲಿ ಮೂವರು ಕೊಚ್ಚಿ ಹೋಗಿದ್ದರು. ಶುಕ್ರವಾರ ತಡರಾತ್ರಿ ಮಳೆ ಹಾಗೂ ಕತ್ತಲು ಇದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಶನಿವಾರ ಬೆಳಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಪುರೋಹಿತರಾದ ವಾಸುದೇವ್‌ ಮೃತ ದೇಹ ಸುಮಾರು 1 ಕಿಲೋ ಮೀಟರ್‌ನಷ್ಟು ದೂರದ ಸುಮನಹಳ್ಳಿ ಸೇತುವೆ ಬಳಿ ಪತ್ತೆಯಾಗಿದೆ.

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆ ನೀರಿಯಲ್ಲಿ ಕೊಚ್ಚಿ ಹೋಗಿರುವ ತಾಯಿ ಮಗಳಾದ ನಿಂಗಮ್ಮ, ಪುಷ್ಪಾ ಅವರಿಗಾಗಿ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ.

Bengaluru Rain: One dead body Found

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ