ಆ್ಯಪ್ನಗರ

ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್‌: ಬಿಎಸ್‌ವೈ, ಡಿಕೆಶಿಗೆ ಸುಪ್ರೀಂನಿಂದ ತಾತ್ಕಾಲಿಕ ರಿಲೀಫ್‌

2010ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಬೆನ್ನಿಗಾನಹಳ್ಳಿಯ 4 ಎಕರೆ 20 ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದರು. ನಂತರ ಸರ್ವೆ ನಂ 50/2ರಲ್ಲಿ 4 ಎಕರೆ 20 ಗುಂಟೆ ಜಮೀನನನ್ನು ಶ್ರೀನಿವಾಸ್‌ ಎಂಬುವರಿಂದ ಡಿಕೆಶಿ ಖರೀದಿಸಿದ್ದರು. ಈ ಮೂಲಕ ಕಾಂಗ್ರೆಸ್‌ ನಾಯಕ ಶಿವಕುಮಾರ್‌ಗೆ ಯಡಿಯೂರಪ್ಪ ಅನುಕೂಲ ಮಾಡಿಕೊಟ್ಟಿದ್ದರು.

Vijaya Karnataka 7 Jan 2020, 1:25 pm
ಹೊಸದಿಲ್ಲಿ: ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮರು ವಿಚಾರಣೆ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಎರಡು ವಾರಗಳ ಕಾಲ ಮುಂದೂಡಿದೆ. ಈ ಮೂಲಕ ಇಬ್ಬರು ನಾಯಕರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.
Vijaya Karnataka Web BS Yediyurappa DK Shivakumar


2010ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬೆನ್ನಿಗಾನಹಳ್ಳಿಯ 4 ಎಕರೆ 20 ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದರು. ನಂತರ ಬೆನ್ನಿಗಾನಹಳ್ಳಿ ಸರ್ವೆ ನಂ 50/2ರಲ್ಲಿ 4 ಎಕರೆ 20 ಗುಂಟೆ ಜಮೀನನನ್ನು ಶ್ರೀನಿವಾಸ್‌ ಎಂಬುವರಿಂದ ಶಿವಕುಮಾರ್ ಖರೀದಿಸಿದ್ದರು. ಈ ಮೂಲಕ ಕಾಂಗ್ರೆಸ್‌ ನಾಯಕ ಶಿವಕುಮಾರ್‌ಗೆ ಯಡಿಯೂರಪ್ಪ ಅನುಕೂಲ ಮಾಡಿಕೊಟ್ಟಿದ್ದರು. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಆರೋಪವಾಗಿದೆ.

ಪ್ರಕರಣದಲ್ಲಿ ಇಬ್ಬರಿಗೂ ಕರ್ನಾಟಕ ಹೈಕೋರ್ಟ್‌ ಈ ಹಿಂದೆ ಅಂದರೆ 2015ರ ಡಿಸೆಂಬರ್‌ 18ರಂದು ಕ್ಲೀನ್‌ಚಿಟ್‌ ನೀಡಿತ್ತು. ಆದರೆ ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ ಹಿರೇಮಠ್‌ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯಕ್ಕೆ ಈ ಹಿಂದಿನ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಸಂಸ್ಥೆ ಪರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾ. ಬಿಆರ್‌ ಗವಾಯ್‌, ಸೂರ್ಯ ಕಾಂತ್‌ ಯಾದವ್‌ ಅವರಿದ್ದ ಪೀಠ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಒಂದೊಮ್ಮೆ ನ್ಯಾಯಪೀಠ ಪ್ರಕರಣದ ಮರು ವಿಚಾರಣೆಗೆ ಒಪ್ಪಿಗೆ ನೀಡಿದ್ದೇ ಆದಲ್ಲಿ ಯಡಿಯೂರಪ್ಪ ಮತ್ತು ಶಿವಕುಮಾರ್ ಇಬ್ಬರಿಗೂ ಕಾನೂನು ಸಂಕಷ್ಟ ಎದುರಾಗುವ ಎಲ್ಲಾ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ