ಆ್ಯಪ್ನಗರ

ರಾಜ್ಯದ ರೈತರಲ್ಲಿ ಆತಂಕ ಸೃಷ್ಟಿಸಲೆಂದೇ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಭಗವಂತ್ ಖೂಬಾ ಆರೋಪ

ರಾಜ್ಯದ ರೈತರಲ್ಲಿ ಆತಂಕ ಸೃಷ್ಟಿಸಲೆಂದೇ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಏನು ಹೇಳಿದರು ಎಂಬ ವಿವರ ಇಲ್ಲಿದೆ.

Vijaya Karnataka Web 27 Oct 2021, 5:32 pm
ಬೆಂಗಳೂರು: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರ ಸುಳ್ಳು ರಾಜ್ಯದ ರೈತರ ಆತಂಕ ಸೃಷ್ಟಿ ಮಾಡುತ್ತಿದ್ದು, ಉಪಚುನಾವಣೆಯ ಸೋಲಿನ ಭೀತಿ ಹಾಗೂ ಹತಾಶೆಯಿಂದ ರೈತರ ರಸಗೊಬ್ಬರ ಬಗ್ಗೆ ಸುಳ್ಳು ವದಂತಿ ಸೃಷ್ಟಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ತಿರುಗೇಟು ನೀಡಿದ್ದಾರೆ.
Vijaya Karnataka Web Bhagwanth Khuba


ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಗವಂತ ಖೂಬಾ, ಕಳೆದ ಎರಡು ವರ್ಷದಲ್ಲಿ ಮಹಾರಾಷ್ಟ್ರ ಮಧ್ಯಪ್ರದೇಶ ಹಾಗೂ ಕರ್ನಾಟಕದ ಸ್ವಲ್ಪ ಭಾಗದಲ್ಲಿ ಕಾಂಪ್ಲೆಕ್ಸ್ ಗೊಬ್ಬರ ಬಳಕೆ ಹೆಚ್ಚಾಗುತ್ತಿದೆ. ರಾಜ್ಯದ ರೈತರು ಅದನ್ನು ಅಳವಡಿಸಿಕೊಂಡರೆ ರೈತರಿಗೆ ಅನುಕೂಲವಾಗಲಿದೆ. ಡಿಎಪಿ ಬದಲು ಕಾಂಪ್ಲೆಕ್ಸ್ ಗೊಬ್ಬರದಿಂದ ಹೆಚ್ಚಿನ ಉತ್ಪಾದನೆ ಹೆಚ್ಚಾಗುತ್ತಿದೆ.ಹೀಗಾಗಿ ಕಾರಣಕ್ಕೆ ಸರ್ಕಾರ ಡಿಎಪಿ ಬದಲು ಕಾಂಪ್ಲೆಕ್ಸ್ ಗೊಬ್ಬರ ಖರೀದಿಗೆ ಸೂಚಿಸಲಾಗುತ್ತಿದೆ. ಇದರಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ರೈತರು ಕಾಂಪ್ಲೆಕ್ಸ್ ಗೊಬ್ಬರ ಬಳಕೆ ಮಾಡಲು ಆಸಕ್ತಿ ತೋರುತ್ತಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದವರು. ರೈತರಿಗೆ ಈ ರೀತಿ ಭಯ ಹುಟ್ಟಿಸುವ ಕೆಲಸ ಮಾಡಬಾರದು. ಈ ರೀತಿ ವದಂತಿ ಸೃಷ್ಟಿಸಿದರೆ ರಸಗೊಬ್ಬರದ ಕೊರತೆ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ರೈತರು ಮುಂದಿನ ನಾಲ್ಕು ತಿಂಗಳಿಗೆ ಬೇಕಾದಷ್ಟು ಗೊಬ್ಬರ ಸಂಗ್ರಹಕ್ಕೆ ಮುಂದಾಗುತ್ತಾರೆ. ಇದರಿಂದ ದಲ್ಲಾಳಿಗಳ ಹಾವಳಿ ಹೆಚ್ಚಾಗಲಿದೆ.ಕಾಳಸಂತೆಯಲ್ಲಿ ರಸಗೊಬ್ಬರಕ್ಕೆ ಮಾರಾಟಕ್ಕೆ ಅವಕಾಶ ಕೊಡಬಾರದು. ನಾನು ಇಲಾಖೆಯ ಜವಾಬ್ದಾರಿ ಸಚಿವನಾಗಿ ರೈತರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಡಿಕೆಶಿ ಆಪರೇಷನ್‌ನಿಂದ ಮಂಕಾದ ಕಾಂಗ್ರೆಸ್ ಐಟಿ ಸೆಲ್‌! ಪರಿಶೀಲನಾ ಸಮಿತಿ ಒಪ್ಪಿಗೆ ಬಳಿಕವಷ್ಟೇ ಟ್ವೀಟ್!

2008 ರಲ್ಲಿ ಕೇಂದ್ರದಲ್ಲಿ ಬೇಜವಾಬ್ದಾರಿ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಇದರಿಂದ ರಾಜ್ಯಗಳಲ್ಲಿ ಬೀಜ ಗೊಬ್ಬರದ ಸಮಸ್ಯೆಯಾಗಿತ್ತು. ಆಗ ಕೇಂದ್ರ ಸರ್ಕಾರ ಏಕೆ ಗೊಬ್ಬರ ಸರಬರಾಜು ಮಾಡಿರಲಿಲ್ಲ ಎಂದು ಹೇಳಬೇಕೆಂದು ಭಗವಂತ್ ಖೂಬಾ ಸಿದ್ದರಾಮಯ್ಯರಿಗೆ ಪ್ರಶ್ನಿಸಿದರು.

ನಾವು ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇವೆ.ಈ ವರ್ಷ ಮಳೆ ಹೆಚ್ಚಳವಾಗಿದ್ದರಿಂದ ರೈತರು ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರ ಖರೀದಿ ಮಾಡುತ್ತಿದ್ದಾರೆ. ಚೀನಾ ರಸಗೊಬ್ಬರ ರಫ್ತು ಸ್ಥಗಿತಗೊಳಿಸಿದೆ. ಅಮೇರಿಕಾದಲ್ಲಿ ಸೈಕ್ಲೋನ್ ಬಂದಿರುವುದರಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಈ ವರ್ಷ ಆತ್ಮನಿರ್ಭರ ಭಾರತ ಅಡಿಯಲ್ಲಿ ನ್ಯಾನೊ ಯುರಿಯಾ ಉತ್ಪಾದನೆ ಹೆಚ್ಚಾಗಿದೆ. ಮುಂದಿನ ವರ್ಷ ನ್ಯಾನೊ ಡಿಎಪಿ ಉತ್ಪಾದನೆ ಮಾಡಲಾಗುವುದು. ಯೂರಿಯಾ ರಾಜ್ಯದಲ್ಲಿ 22 ಲಕ್ಷ ಮೆಟ್ರಿಕ್ ಟನ್ ಲಭ್ಯವಿದೆ. ಎಂ ಒ ಪಿ 29. ಲಕ್ಷ ಮೆಟ್ರಿಕ್ ಟನ್ ಲಭ್ಯವಿದೆ. ಮೈಸೂರು ಭಾಗದಲ್ಲಿ ಸ್ವಲ್ಪ ಕೊರತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅದಕ್ಕೆ ಕೇಂದ್ರದಿಂದ 3 ಸಾವಿರ ಮೆಟ್ರಿಕ್ ಟನ್ ತರಿಸಲು ಸೂಚನೆ ನೀಡಿದ್ದೇನೆ

ಎರಡು ಕಾರ್ಖಾನೆಗಳಲ್ಲಿ ಉತ್ಪಾದನೆಗೆ ಕ್ರಮ ಕೈಗೊಂಡಿದ್ದೇವೆ. ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, 78.51 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಬಿತ್ತನೆಗೆ ಅವಶ್ಯವಿರುವ ಪರಿಕರಗಳ ಸರಬರಾಜನ್ನು ರಾಜ್ಯದಿಂದ ಸಮರ್ಪಕವಾಗಿ ಮಾಡಲಾಗಿದೆ.

ರಸಗೊಬ್ಬರಗಳನ್ನು ಕೇಂದ್ರ ಸರ್ಕಾರದ ಹಂಚಿಕೆಯಂತೆ ಜಿಲ್ಲೆಗಳಿಗೆ ಸರಬರಾಜು ಮಾಡಲು ಕ್ರಮವಹಿಸಲಾಗಿದೆ. 2021-22 ರ ಸಾಲಿನ ಹಿಂಗಾರು/ಬೇಸಿಗೆ ಹಂಗಾಮಿಗೆ (ಅಕ್ಟೋಬರ್-2021 ರಿಂದ ಮಾರ್ಚ್ 2022ರವರೆಗೆ) 16.94 ಲಕ್ಷ ಮೆಟನ್ (ಯೂರಿಯಾ-6.50 ಲಕ್ಷ ಮೆ.ಟನ್, ಡಿಎಪಿ 2.10 ಲಕ್ಷ ಮೆ.ಟನ್, ಎಂಒಪಿ-1.17 ಲಕ್ಷ ಮೆಟನ್ ಮತ್ತು ಕಾಂಪ್ಲೆಕ್ಸ್ 7.17 ಲಕ್ಷ ಮೆಟನ್) ಪ್ರಮಾಣದ ವಿವಿಧ ಗ್ರೇಡ್ ಗಳ ರಸಗೊಬ್ಬರದ ಬೇಡಿಕೆಯಿರುತ್ತದೆ.2021-22 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳ ಪ್ರಸ್ತಾವಿತ ಬಿತ್ತನೆ ಗುರಿ 28 ಲಕ್ಷ ಹೆಕ್ಟೇರ್ ಗೆ ಪ್ರತಿಯಾಗಿ ಅಕ್ಟೋಬರ್ 26 ರವರೆಗೆ 5.02 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.18 ಬಿತ್ತನೆಯಾಗಿದೆ.

2021-22 ನೇ ಸಾಲಿನ ಬೇಸಿಗೆ ಹಂಗಾಮಿನಲ್ಲಿ ಕೃಷಿ ಬೆಳೆಗಳ ಪ್ರಸ್ತಾವಿತ ಬಿತ್ತನೆ ಗುರಿ 5.00 ಲಕ್ಷ ಹೆಕ್ಟೇರ್ ಇರುತ್ತದೆ. ನೇರ ರಸಗೊಬ್ಬರದ ಬದಲಿಗೆ ಕಾಂಪ್ಲೆಕ್ಸ್ ರಸಗೊಬ್ಬರದಲ್ಲಿ ಸಮತೋಲಿತ ಪೋಷಕಾಂಶಗಳೊಂದಿಗೆ ತ್ವರಿತವಾಗಿ ಬೆಳೆಗಳಿಗೆ ಲಭ್ಯವಾಗುವ ಕಾರಣ ಪ್ರಸ್ತುತ ನೇರ ರಸಗೊಬ್ಬರದ ಬದಲಾಗಿ ಕಾಂಪ್ಲೆಕ್ಸ್ ರಸಗೊಬ್ಬರವನ್ನು ಬಳಕೆ ಮಾಡಲು ರೈತರಿಗೆ ಪ್ರೋತ್ಸಾಹಿಸಲಾಗಿದ್ದು, ಈ ಬಗ್ಗೆ ರೈತರಿಗೆ ಮನವರಿಗೆ ಮಾಡಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ