ಆ್ಯಪ್ನಗರ

ನಿಂಬಾಳ್ಕರ್‌ ವಿರುದ್ಧ ಬಿಜೆಪಿ ಆಕ್ರೋಶ

ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ದುರುದ್ದೇಶ ಪೂರಿತ ಪ್ರಕರಣ ದಾಖಲಿಸುವ ಮೂಲಕ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ಲಿಂಬಾಳ್ಕರ್‌ ರಾಜಕೀಯ ಪ್ರೇರಿತವಾಗಿ ವರ್ತಿಸುತ್ತಿದ್ದಾರೆ.

Vijaya Karnataka 18 Apr 2018, 12:37 pm
ಬೆಂಗಳೂರು: ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ದುರುದ್ದೇಶ ಪೂರಿತ ಪ್ರಕರಣ ದಾಖಲಿಸುವ ಮೂಲಕ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ಲಿಂಬಾಳ್ಕರ್‌ ರಾಜಕೀಯ ಪ್ರೇರಿತವಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
Vijaya Karnataka Web limbavali


ಲಿಂಬಾವಳಿ ವಿರುದ್ಧ ದೂರು ದಾಖಲಿಸುವ ಜತೆಗೆ ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಅವರ ಪುತ್ರಿಯ ಶಾಲೆಯಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕುವುದಕ್ಕೆ ಲಿಂಬಾಳ್ಕರ್‌ ಬೆಂಬಲ ನೀಡಿದ್ದಾರೆ. ಇದರ ಫಲವಾಗಿ ಲಿಂಬಾಳ್ಕರ್‌ ಅವರ ಪತ್ನಿ ಅಂಜಲಿ ಲಿಂಬಾಳ್ಕರ್‌ ಅವರಿಗೆ ಖಾನಾಪುರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕಿದ್ದಕ್ಕಾಗಿ ರಾಜಕೀಯ ಲಾಭ ಪಡೆದುಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥನಾರಾಯಣ ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ