ಆ್ಯಪ್ನಗರ

Dharmendra Pradhan: ಧರ್ಮೇಂದ್ರ ಪ್ರಧಾನ್‌ಗೆ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಹೊಣೆ; ಅಣ್ಣಾಮಲೈ ಸಹ ಉಸ್ತುವಾರಿ!

Dharmendra Pradhan Poll In Charge For Karnataka: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕರ್ನಾಟಕ ಬಿಜೆಪಿಗೆ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ನೇಮಕವಾಗಿದ್ದರೆ. ಇವರ ಜೊತೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸಹ ಉಸ್ತುವಾರಿ ಹೊಣೆಯನ್ನು ನೀಡಲಾಗಿದೆ. ಶನಿವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದಾ ಅವರು ಆದೇಶ ಹೊರಡಿಸಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಧರ್ಮೇಂದ್ರ ಪ್ರಧಾನ್‌ಗೆ ಚುನಾವಣೆ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ.

Edited byಅವಿನಾಶ ವಗರನಾಳ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 4 Feb 2023, 1:33 pm

ಹೈಲೈಟ್ಸ್‌:


  • ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್‌ ನೇಮಕ
  • ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸಹ ಉಸ್ತುವಾರಿ ಹೊಣೆ
  • ಈ ಹಿಂದೆ ಬಿಜೆಪಿ ರಾಜ್ಯ ಉಸ್ತುವಾರಿ ಆಗಿದ್ದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Dharmendra Pradan K Annamalai
ಧರ್ಮೇಂದ್ರ ಪ್ರಧಾನ್‌, ಕೆ ಅಣ್ಣಾಮಲೈ (ಸಂಗ್ರಹ ಚಿತ್ರ)
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ‌. ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಿಯೂ ಕೆಲಸ ಮಾಡಿದ ಅನುಭವ ಇರುವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಅಧಿಕೃತ ಆದೇಶವನ್ನು ಮಾಡಿದ್ದು, ಈ ಚುನಾವಣೆಯಲ್ಲಿ ಕರ್ನಾಟಕದ ಚುನಾವಣಾ ಉಸ್ತುವಾರಿಯನ್ನು ಧರ್ಮೇಂದ್ರ ಪ್ರಧಾನ್‌ ಹೊತ್ತುಕೊಳ್ಳಲಿದ್ದಾರೆ. ಇನ್ನು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಕರ್ನಾಟಕ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನಿಯೋಜನೆ ಮಾಡಲಾಗಿದೆ. ಅಣ್ಣಾಮಲೈ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿಯೂ ಕೆಲಸ ಮಾಡಿದ್ದರು. ಈ ನಿಟ್ಟಿನಲ್ಲಿ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ಧರ್ಮೇಂದ್ರ ಪ್ರಧಾನ್‌ ಯಾರು?
ಒಡಿಶಾ ಮೂಲದವರಾಗಿರುವ ಧರ್ಮೇಂದ್ರ ಪ್ರಧಾನ್‌ 2000ನೇ ಇಸವಿಯಲ್ಲಿ ಒಡಿಶಾ ವಿಧಾನಸಭೆಯ ಶಾಸಕರಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ಅದಾದ ಬಳಿಕ 2004ರಲ್ಲಿ ಒಡಿಶಾದ ದಿಯೋಗರ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ ಛತ್ತೀಸ್‌ಗಢದ ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್‌ ಅವರನ್ನು 2007ರಲ್ಲಿ ನೇಮಿಸಲಾಗಿತ್ತು. ಬಳಿಕ ಬಿಜೆಪಿ ಉತ್ತರಾಖಂಡದ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಧರ್ಮೇಂದ್ರ ಪ್ರಧಾನ್‌, ಬಿಹಾರ ಚುನಾವಣೆ ವೇಳೆ ಬಿಜೆಪಿ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಚುನಾವಣೆ ಎದುರಿಸಲು ಕಮಲ ಸಿದ್ಧತೆ: ವಿಶೇಷ ಕೋರ್ ಕಮಿಟಿ, ಕಾರ್ಯಕಾರಿಣಿ ಸಭೆಯಲ್ಲಿ ನಡೆಯಲಿದೆ ಪ್ರಮುಖ ವಿಚಾರಗಳ ಚರ್ಚೆ
2011ರಿಂದ 2013 ರವರೆಗೂ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕವಾಗಿದ್ದ ಅವರು, ಸದ್ಯ ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿಯಾಗಿದ್ದಾರೆ. ಪ್ರಸ್ತುತ ಮಧ್ಯಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿರುವ ಧರ್ಮೇಂದ್ರ ಪ್ರಧಾನ್‌ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್‌ನಲ್ಲಿ ಹಲವು ಖಾತೆಗಳನ್ನು ನಿಭಾಯಿಸುತ್ತಿದ್ದಾರೆ.

BS Yediyurappa: ಅನುಮಾನವೇ ಬೇಡ, ಕಾಂಗ್ರೆಸ್ ಬಸ್ ಯಾತ್ರೆ ಮಧ್ಯದಲ್ಲಿ ಪಂಚರ್ ಆಗುತ್ತೆ: ಯಡಿಯೂರಪ್ಪ ಭವಿಷ್ಯ
ಅಣ್ಣಾಮಲೈ ಯಾರು?
ಸದ್ಯ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ ಅಣ್ಣಾಮಲೈ,
2011ರಲ್ಲಿ ಭಾರತೀಯ ಪೊಲೀಸ್‌ ಸೇವೆ ಸೇರಿದ್ದು, 2013ರ ಸೆಪ್ಟೆಂಬರ್‌ನಲ್ಲಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಪೊಲೀಸ್‌ ವೃತ್ತಿಯನ್ನು ಆರಂಭಿಸಿದ್ದರು. ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ಪಡೆದ ಅವರು 2015 ರಿಂದ 2016ರವರೆಗೆ ಉಡುಪಿ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು ಎಸ್‌ಪಿಯಾಗಿದ್ದ ಅವರು 2018ರಲ್ಲಿ ಬೆಂಗಳೂರು ದಕ್ಷಿಣ ಪೊಲೀಸ್‌ ಉಪ ಆಯುಕ್ತರಾಗಿ ಬಡ್ತಿ ಹೊಂದಿದ್ದರು. ಆದರೆ, 2019ರಲ್ಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯವನ್ನು ಪ್ರವೇಶಿಸಿದರು.

Pralhad Joshi: ಕುಟುಂಬದಲ್ಲಿ ಒಟ್ಟಿಗೆ ಇರಲು ಯೋಗ್ಯತೆ ಇಲ್ಲದವರು ರಾಜ್ಯ ಉದ್ಧಾರ ಮಾಡ್ತಾರಾ? ಜೆಡಿಎಸ್‌ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ
ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆಚುನಾವಣಾ ಸಿದ್ದತೆ ನಿಟ್ಟಿನಲ್ಲಿ ಶನಿವಾರ ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಭಾಗಿಯಾಗಿದ್ದರು. ಚುನಾವಣಾ ಸಿದ್ದತೆ, ಸಂಘಟನೆ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ‌.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ